Advertisement

ಬೆಂಗಳೂರಿನಲ್ಲಿ ಆರೋಗ್ಯ ಸೌಲಭ್ಯ ವಿಸ್ತರಣೆಗೆ ಜಾಗದ ಕೊರತೆ : ಸಚಿವ ಅಶ್ವತ್ಥನಾರಾಯಣ

06:43 PM Aug 28, 2021 | Team Udayavani |

ಬೆಂಗಳೂರು: ನಗರದಲ್ಲಿ ಜನಸಂಖ್ಯೆಗೆ ತಕ್ಕಂತೆ ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ಜಾಗದ ಕೊರತೆ ಇದ್ದು, ಒಂದು ವೇಳೆ ಸ್ಥಳಾವಕಾಶ ಸಿಕ್ಕರೆ ಎಷ್ಟು ಆಸ್ಪತ್ರೆಗಳನ್ನಾದರೂ ಕಟ್ಟಲು ಸರಕಾರ ತಯಾರಿದೆ ಎಂದು ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಖಾತೆ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

Advertisement

ಇಂದು ಬೆಂಗಳೂರು ಉತ್ತರ ಜಿಲ್ಲೆಯ ಬಿಜೆಪಿ ಮಂಡಲ ವಿಭಾಗವು ಹಮ್ಮಿಕೊಂಡಿದ್ದ ಆರೋಗ್ಯ ಸ್ವಯಂ ಸೇವಕರ ಅಭಿಯಾನ ಉದ್ಘಾಟಿಸಿ ಮಾತನಾಡಿದ ಅವರು, ನಗರಕ್ಕೆ ಇನ್ನಷ್ಟು ಆರೋಗ್ಯ ಸೌಕರ್ಯಗಳು ಅಗತ್ಯ ಇವೆ. ಇರುವ ಜಾಗದಲ್ಲಿಯೇ ಅಭಿವೃದ್ಧಿ ಮಾಡುವ ಕೆಲಸವೂ ಆಗುತ್ತಿದೆ ಎಂದರು.

ಕೋವಿಡ್ ಸಂಕಷ್ಟ ಕಾಲದಲ್ಲಿ ಪಕ್ಷದ ಕಾರ್ಯಕರ್ತರು ಅತ್ಯುತ್ತಮವಾಗಿ ಕೆಲಸ ಮಾಡಿದ್ದಾರೆ, ಈಗಲೂ ಮಾಡುತ್ತಿದ್ದಾರೆ. ನಮ್ಮ ಸೇವಾ ಹೀ ಸಂಘಟನೆ ಮೂಲಕ ಆಗುತ್ತಿರುವ ಸೇವಾ ಕಾರ್ಯಗಳು ಶ್ಲಾಘನೀಯ. ಇದರಲ್ಲಿ ಪ್ರತಿಯೊಬ್ಬರೂ ಭಾಗಿಯಾಗಬೇಕು ಎಂದು ಅವರು ಹೇಳಿದರು.

ಪಕ್ಷದ ವರಿಷ್ಠರು ನಮ್ಮ ದೇಶದ ಎಲ್ಲ ಮಂಡಲ, ಬೂತ್ಗಳಲ್ಲಿ ಸೇವೆ ಮಾಡುವ ಸಂಕಲ್ಪದೊಂದಿಗೆ ನಮಗೆ ಮಾರ್ಗದರ್ಶನ ಮಾಡುತ್ತಿದ್ದಾರೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯೊಣ ಎಂದು ಸಚಿವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next