Advertisement

ಸುಲೇಪೇಟ ಆಸ್ಪತ್ರೆಗೆ ಸಿಬ್ಬಂದಿ ಕೊರತೆ

12:52 PM May 03, 2022 | Team Udayavani |

ಚಿಂಚೋಳಿ: ತಾಲೂಕಿನ ಸುಲೇಪೇಟ ಗ್ರಾಮದಲ್ಲಿದ್ದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವೆಂದು ಮೇಲ್ದರ್ಜೆಗೇರಿಸಿ ಆರು ತಿಂಗಳಾದರೂ ಯಾವುದೂ ಕಾರ್ಯರೂಪಕ್ಕೆ ಬಂದಿಲ್ಲವೆಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರಗೆ ಮನವಿ ಪತ್ರ ಸಲ್ಲಿಸಿದರು.

Advertisement

ಸುಲೇಪೇಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಯಾವುದೇ ರೀತಿಯ ವೈದ್ಯಕೀಯ ಉಪಕರಣಗಳು ಲಭ್ಯವಿಲ್ಲ. ವೈದ್ಯರ ಹುದ್ದೆ, ನರ್ಸ್‌ ಹಾಗೂ ಇನ್ನಿತರ ಹುದ್ದೆಗಳು ಖಾಲಿ ಇವೆ. ಆರೋಗ್ಯ ಸೇವೆ ಸರಿಯಾಗಿ ದೊರಕುತ್ತಿಲ್ಲ. ತುರ್ತು ಪರಿಸ್ಥಿತಿ, ಸಣ್ಣಪುಟ್ಟ ಚಿಕಿತ್ಸೆಗೂ ವೈದ್ಯರು ಲಭ್ಯವಿರುವುದಿಲ್ಲ. ಇದರಿಂದ ರೋಗಿಗಳು ಪರದಾಡುವಂತೆ ಆಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಆಸ್ಪತ್ರೆಯಲ್ಲಿ ಎಕ್ಸರೇ, ಇಸಿಜಿ, ರಕ್ತ ನಿಧಿ ಕೇಂದ್ರವಿಲ್ಲ. ಗ್ರಾಮೀಣ ಪ್ರದೇಶದಿಂದ ಹೆರಿಗೆಗಾಗಿ ಬರುವ ಮಹಿಳೆಯರು ತೊಂದರೆ ಪಡುವಂತಾಗಿದೆ. ಸುಲೇಪೇಟ ಗ್ರಾಮ ಹೋಬಳಿ ಕೇಂದ್ರವಾಗಿದ್ದು, ಸುತ್ತಲೂ 35 ಹಳ್ಳಿಗಳನ್ನು ಹೊಂದಿದೆ. ದೂರದ ಗ್ರಾಮಗಳಿಂದ ಚಿಕಿತ್ಸೆಗಾಗಿ ಬರುವ ಜನರಿಗೆ ಆರೋಗ್ಯ ಸೇವೆಗಳು ಮರೀಚಿಕೆಯಾಗಿವೆ. ಕೂಡಲೇ ಸರ್ಕಾರ ಅಗತ್ಯ ಸೌಲಭ್ಯ ಒದಗಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಸಚಿನ್‌ ಚವ್ಹಾಣ ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next