Advertisement

ಶಿವಮೊಗ್ಗ ಚಲೋ ಹಿಂದೆ ‘ಕೆಪಿಸಿಸಿ ಅಘೋಷಿತ ಅಧ್ಯಕ್ಷೆ ಮಹಾನಾಯಕಿ’ಯ ಕೈವಾಡ: ಬಿಜೆಪಿ

11:23 AM Mar 18, 2021 | Team Udayavani |

ಬೆಂಗಳೂರು: ಇತ್ತೀಚೆಗೆ ಕಾಂಗ್ರೆಸ್ ನಡೆಸಿದ ಶಿವಮೊಗ್ಗ ಚಲೋ ಜಾಥಾದ ಹಿಂದೆ ಕೆಪಿಸಿಸಿಯ ಅಘೋಷಿತ ಅಧ್ಯಕ್ಷೆ ಮಹಾನಾಯಕಿಯ ಕೈವಾಡವಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ.

Advertisement

ಕೆಲ ದಿನಗಳಿಂದ ನಡೆಯುತ್ತಿರುವ ರಾಜ್ಯ ಬಿಜೆಪಿ- ಕಾಂಗ್ರೆಸ್ ನಡುವಿನ ಟ್ವೀಟ್ ಸಮರ ಮುಂದುವರಿದಿದೆ. ಇಂದು ಟ್ವೀಟ್ ಮಾಡಿರುವ ಬಿಜೆಪಿ, ಶಿವಮೊಗ್ಗ ಚಲೋ ಹಿಂದೆ ಕೆಪಿಸಿಸಿ ಅಘೋಷಿತ ಅಧ್ಯಕ್ಷೆ ಮಹಾನಾಯಕಿಯ ಕೈವಾಡವಿದೆ. “ಮಹಾನಾಯಕ”ನೊಬ್ಬರು ಅಘೋಷಿತ ಅಧ್ಯಕ್ಷೆಯ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ ಎಂದಿದೆ.

ಇದನ್ನೂ ಓದಿ:ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿಯಾದ ನಟ ಕಿಚ್ಚ ಸುದೀಪ್

ಬೀಗ-ಬೀಗತಿ ಸಂಬಂಧಕ್ಕಾಗಿ ಶಿವಮೊಗ್ಗ ಚಲೋ ಮಾಡಿದ ಕಾಂಗ್ರೆಸ್, ಜನತೆಗೆ ತಪ್ಪು ಮಾಹಿತಿ ನೀಡಿ, ಸದನದ ಸಮಯ ವ್ಯರ್ಥ ಮಾಡಿತ್ತು ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಭದ್ರವಾತಿ ಕಬಡ್ಡಿ ಕೂಟದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಶಾಸಕ ಸಂಗಮೇಶ್ ಮತ್ತು ಕುಟುಂಬದವರ ವಿರುದ್ಧ ಕೇಸು ದಾಖಲಾಗಿತ್ತು. ಅದಲ್ಲದೆ ಸಂಗಮೇಶ್ ಪುತ್ರನನ್ನು ಪೊಲೀಸರು ಬಂಧಿಸಿದ್ದರು. ಇದನ್ನು ವಿರೋಧಿಸಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನಾ ಸಮಾವೇಶ ನಡೆಸಲಾಗಿತ್ತು.

Advertisement

ಇದನ್ನೂ ಓದಿ: ಕುಸ್ತಿ ಕೂಟದಲ್ಲಿ ಒಂದು ಅಂಕದಿಂದ ಸೋಲು: ಮನನೊಂದ ಗೀತಾ ಪೋಗಟ್ ಸಹೋದರಿ ಆತ್ಮಹತ್ಯೆ!

Advertisement

Udayavani is now on Telegram. Click here to join our channel and stay updated with the latest news.

Next