Advertisement

ಡಿಸಿಗಳಿಗೆ ಕೆರೆ ಅಭಿವೃದ್ಧಿ ಅಧಿಕಾರ: ಸಚಿವ ಬೈರತಿ ಬಸವರಾಜ್‌

11:43 AM Jul 14, 2020 | mahesh |

ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದಿಂದ 11 ಕೋಟಿ ರೂ. ಕೆರೆ ಅಭಿವೃದ್ಧಿ ಶುಲ್ಕ ಸಂಗ್ರಹಿಸಿದ್ದು, ಈಗಾಗಲೇ 5 ಕೋಟಿ ರೂ. ವೆಚ್ಚದಲ್ಲಿ 19 ಕೆರೆಗಳ ಅಭಿವೃದ್ಧಿ ನಡೆದಿದೆ. ಇನ್ನೂ 5 ಕೋಟಿ ರೂ. ಕಾಮಗಾರಿಗೆ ಯೋಜನಾ ವರದಿ ಸಿದ್ಧಪಡಿಸಿ ಸಲ್ಲಿಸಲಾಗಿದೆ ಎಂದು ಪ್ರಾಧಿಕಾರದ ಪ್ರಭಾರ ಆಯುಕ್ತ ರಾಜು ಅವರು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಅವರಿಗೆ ತಿಳಿಸಿದರು.

Advertisement

ಸೋಮವಾರ ಜಿ.ಪಂ. ಸಭಾಂಗಣ ದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಕ್ರಿಯಾ ಯೋಜನೆ ರೂಪಿಸುವಾಗ ಸ್ಥಳೀಯ ಶಾಸಕರ ಸಲಹೆಗಳಿಗೆ ಆದ್ಯತೆ ನೀಡುವಂತೆ ತಿಳಿಸಿದರು. ಕೆರೆ ಅಭಿವೃದ್ಧಿಗೆ ಅನುಮತಿ ನೀಡುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೇ ನೀಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಹೇಳಿದರು.

ಒಳಚರಂಡಿ ಯೋಜನೆ
ಕುಂದಾಪುರದ ಒಳಚರಂಡಿ ಯೋಜನೆ 2017ಕ್ಕೆ ಮುಕ್ತಾಯಗೊಳ್ಳಬೇಕಾಗಿದ್ದರೂ ಇದುವರೆಗೆ ಮುಕ್ತಾಯಗೊಳ್ಳದ ಕುರಿತು ಅಸಮಾಧಾನ ವ್ಯಕ್ತ ಪಡಿಸಿದರು. ಕಾರ್ಕಳದ ಒಳಚರಂಡಿ ಯೋಜನೆಗಳನ್ನು ಶೀಘ್ರ ಮುಗಿಸುವಂತೆ ತಿಳಿಸಿದರು. 14 ವರ್ಷಗಳ ಹಿಂದಿನ ಉಡುಪಿ ನಗರದ ಒಳಚರಂಡಿ ಯೋಜನೆಯನ್ನು ಮರುವಿನ್ಯಾಸ ದೊಂದಿಗೆ ಡಿಪಿಆರ್‌ ಸಲ್ಲಿಸಿ ಎಂದರು. ಕಾಮಗಾರಿಗಳಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡುವಂತೆ ಸೂಚಿಸಿದ ಸಚಿವರು, ಕೊಲ್ಲೂರಿನಲ್ಲಿ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿರುವ ಒಳಚರಂಡಿ ಮತ್ತು ಕುಡಿಯುವ ನೀರು ಕಾಮಗಾರಿಗಳ ಉದ್ಘಾಟನೆಗೆ ದಿನಾಂಕ ನಿಗದಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next