Advertisement

ಹಣಕ್ಕಾಗಿ ರಾಜ್ಯ ಸರ್ಕಾರದಿಂದ ಕೆರೆ ಡಿನೋಟಿಫೈ: ವಿಶ್ವನಾಥ್‌

07:25 AM Jul 23, 2017 | |

ಮೈಸೂರು: ರಾಜ್ಯ ಸರ್ಕಾರ ಮುಂದಿನ ಚುನಾವಣೆಗೆ ಹಣ ಮಾಡುವ ಉದ್ದೇಶದಿಂದ ಕೆರೆಗಳನ್ನು ಡಿನೋಟಿಫೈ ಮಾಡಿ ರಿಯಲ್‌ ಎಸ್ಟೇಟ್‌ನವರಿಗೆ ಮಾರಲು ಮುಂದಾಗಿದೆ ಎಂದು ಜೆಡಿಎಸ್‌ ನಾಯಕ ಎಚ್‌.ವಿಶ್ವನಾಥ್‌ ಆರೋಪಿಸಿದರು. 

Advertisement

ನೀರಿಲ್ಲ ಎಂಬ ಕಾರಣ ಮುಂದಿಟ್ಟುಕೊಂಡು ರಾಜ್ಯ ಸರ್ಕಾರ ಕೆರೆಗಳನ್ನು ಡಿನೋಟಿಫೈಕೇಷನ್‌ ಮಾಡುತ್ತಿದೆ. ಬೆಂಗಳೂರಿನ 195 ಕೆರೆಗಳು ಸೇರಿ ರಾಜ್ಯದ 1,300 ಕೆರೆಗಳನ್ನು ಡಿನೋಟಿಫೈ ಮಾಡಲು ಮುಂದಾಗಿದೆ. ಈ ಸಂಬಂಧ ವಿಧಾನಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಸರ್ಕಾರದ ಈ ತೀರ್ಮಾನ ನಿಜಕ್ಕೂ ಆಘಾತಕಾರಿ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ರಾಜ್ಯದಲ್ಲಿ ಈವರೆಗೂ ಅಧಿಕಾರ ನಡೆಸಿರುವ ಯಾವ ಸರ್ಕಾರವೂ ಕೆರೆ ನಿರ್ಮಿಸಿಲ್ಲ. ಇವೆಲ್ಲ ರಾಜರ ಕಾಲದಲ್ಲಿ ನಿರ್ಮಾಣಗೊಂಡಿವೆ. ಕೆರೆಗಳ ಸಂರಕ್ಷಣೆಗೆ ಕೋಟ್ಯಂತರ ರೂ. ವ್ಯಯಿಸುವ ಸರ್ಕಾರ ಮತ್ತೂಂದೆಡೆ ಕೆರೆಗಳನ್ನು ಡಿನೋಟಿಫೈ ಮಾಡುತ್ತಿರುವುದು
ಮೂರ್ಖತನ ಎಂದರು.

ಸಿಎಂ ಸಿದ್ದರಾಮಯ್ಯ ಮುಂದಿನ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳಿಗೆ10 ಕೋಟಿ ರೂ. ಕೊಡುವುದಾಗಿ ಹೇಳಿದ್ದಾರೆ. ಹೀಗಾಗಿ ರಾಜ್ಯದ ಕೆರೆಗಳನ್ನು ಡಿನೋಟಿಫೈ ಮಾಡಿ, ರಿಯಲ್‌ ಎಸ್ಟೇಟ್‌ನವರಿಗೆ ಮಾರಿ ಹಣ ಸಂಗ್ರಹಿಸುತ್ತಿದ್ದಾರೆಂದು
ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next