Advertisement
ನೂತನ ಕಚೇರಿಯನ್ನು ಉದ್ಘಾಟಿಸಿ, ನೂತನ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ ಅವರನ್ನು ಅಭಿನಂದಿಸಿದ ಶಾಸಕ ವಿನಯಕುಮಾರ್ ಸೊರಕೆ ಮಾತನಾಡಿ, ಕಾಪು ಯೋಜನಾ ಪ್ರಾಧಿಕಾರಕ್ಕೆ ಹಿರಿಯ ಮುತ್ಸದ್ಧಿಯೇ ಅಧ್ಯಕ್ಷರಾಗಿ ಬಂದಿರು ವುದು ನಮ್ಮೆಲ್ಲರಿಗೂ ಹೆಮ್ಮೆಯಾಗಿದೆ. ಕಾಪು ಅಭಿವೃದ್ಧಿಗೆ ದೂರದರ್ಶಿತ್ವದ ಯೋಜನೆಗಳನ್ನು ಹೊಂದಿರುವ ಕಾಪು ದಿವಾಕರ ಶೆಟ್ಟಿ ಅವರು ತಮಗೆ ಸಿಕ್ಕಿರುವ ಅವಕಾಶವನ್ನು ಸಮರ್ಥವಾಗಿ ನಿಭಾಯಿಸುವುದು ಮಾತ್ರವಲ್ಲದೇ, ಕಾಪು ಪುರಸಭೆಯನ್ನು ಮಾದರಿ ಪುರಸಭೆ
ಯನ್ನಾಗಿ ರಚಿಸುವಲ್ಲಿ ಯಶಸ್ವಿಯಾಗು ತ್ತಾರೆ ಎಂಬ ವಿಶ್ವಾಸವಿದೆ ಎಂದರು.
ಕಾಪು ನಗರ ಯೋಜನಾ ಪ್ರಾಧಿ ಕಾರದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕಾಪು ದಿವಾಕರ ಶೆಟ್ಟಿ ಮಾತನಾಡಿ, ನನ್ನ ಅಧಿಕಾರಾವಧಿಯ ಮೂರು ವರ್ಷಗಳಲ್ಲಿ ಯೋಜನಾ ಪ್ರಾಧಿಕಾರದ ವ್ಯಾಪ್ತಿಗೆ ಬರುವ ಪ್ರದೇಶಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗು ವುದು. ಯೋಜನಾ ಪ್ರದೇಶದಲ್ಲಿ ಕೈಗಾರಿಕೆ, ಕ್ರೀಡಾಂಗಣ, ಕೆರೆ, ಪಾರ್ಕ್, ಶ್ಮಶಾನ, ವಾಕಿಂಗ್ ಟ್ರಾಕ್ನಂತಹ ಮಹತ್ವದ ಯೋಜನೆಗಳನ್ನು ಶೀಘ್ರ ಅನುಷ್ಠಾನಿಸಲಾಗುವುದು ಎಂದರು. ಪ್ರಥಮ ಹಂತದಲ್ಲಿ 3 ಕೋ.ರೂ.
ಕಾಪು ನಗರ ಯೋಜನಾ ಪ್ರಾಧಿಕಾ ರಕ್ಕೆ ಪ್ರಥಮ ಹಂತದಲ್ಲಿ ರಾಜ್ಯ ಸರಕಾರ 3 ಕೋ. ರೂ. ಅನುದಾನವನ್ನು ಒದಗಿಸ ಲಿದ್ದು, ಪ್ರಾರಂಭಿಕ ಅನುದಾನದ ಸದ್ಬಳ ಕೆಗೆ ಅಧಿಕಾರಿಗಳು ಮತ್ತು ಜನಪ್ರತಿನಿಧಿ ಗಳೊಂದಿಗೆ ಚರ್ಚಿಸಿ, ಯೋಜನೆ ರೂಪಿಸಲಾಗುವುದು. ಪುರಸಭೆಯ ವಿವಿಧ ಕಾಮಗಾರಿಗಳಿಗೆ ಅತೀ ಹೆಚ್ಚಿನ ಅನುದಾನ ಕ್ರೋಡೀಕರಿಸಲು ಮಹತ್ವದ ನಿರ್ಧಾರ ಮತ್ತು ನಿರ್ಣಯಗಳನ್ನು ತೆಗೆದುಕೊಳ್ಳಲಾಗುವುದು ಎಂದರು. ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ವೇ| ಮೂ| ಶ್ರೀನಿವಾಸ ತಂತ್ರಿ ಕಲ್ಯ ಕಚೇರಿ ಉದ್ಘಾಟಿಸಿ ಶುಭ ಹಾರೈಸಿದರು.
Related Articles
Advertisement