Advertisement

ಜಿಪಂ ವ್ಯಾಪ್ತಿ ಕೆರೆಗಳು ಗ್ರಾಪಂಗಳ ತೆಕ್ಕೆಗೆ

03:15 PM Apr 10, 2021 | Team Udayavani |

ಹುಬ್ಬಳ್ಳಿ: ಜಿಪಂ ವ್ಯಾಪ್ತಿಯ ಕೆರೆಗಳನ್ನು ಗ್ರಾಪಂಗಳಿಗೆ ನೀಡುತ್ತಿದ್ದು, ಜಲಶಕ್ತಿ ಅಭಿಯಾನದ ಮೂಲಕ ಅವುಗಳನ್ನು ಅಭಿವೃದ್ಧಿಪಡಿಸುವ ಕೆಲಸ ಆಗಬೇಕು.ಮುಂದಿನ ಮಳೆಗಾಲ ಆರಂಭವಾಗುವುದರೊಳಗೆ ಈ ಕಾರ್ಯ ಪೂರ್ಣಗೊಳ್ಳಬೇಕು ಎಂದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

Advertisement

ಡೆನಿಸನ್ಸ್‌ ಹೋಟೆಲ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್‌ ಇಲಾಖೆ ಹಾಗೂ ಜಿಪಂ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದರಾಜ್ಯಮಟ್ಟದ ಜಲಶಕ್ತಿ ಅಭಿಯಾನ ಉದ್ಘಾಟನೆ ಮತ್ತುರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಜಲಶಕ್ತಿ ಅಭಿಯಾನದಲ್ಲಿ ಕೈಗೊಳ್ಳಬಹುದಾದ ಚಟುವಟಿಕೆಗಳ ಕುರಿತು ವಿವರವಾದಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ನಿಗದಿತ 100 ದಿನಗಳಲ್ಲಿ ವ್ಯಾಪಕವಾಗಿ ಜಲ ಸಂರಕ್ಷಣಾಕಾಮಗಾರಿಗಳನ್ನು ಕೈಗೊಳ್ಳಬೇಕು ಎನ್ನುವ ಕುರಿತು ಜಿಲ್ಲಾ ಧಿಕಾರಿಗಳು, ಜಿಪಂ ಸಿಇಒಗಳಿಗೆ ಸೂಚನೆ ನೀಡಲಾಗಿದೆ. ನರೇಗಾ ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಕೆಲವೆಡೆ ಅದ್ಭುತ ಕಾರ್ಯಗಳನ್ನುಕೈಗೊಳ್ಳಲಾಗಿದೆ. ಇವು ರಾಜ್ಯಕ್ಕೆ ಮಾದರಿಯಾಗಿದ್ದು,ಜಲಶಕ್ತಿ ಅಭಿಯಾನವನ್ನು ಕೂಡ ಯಶಸ್ವಿಗೊಳಿಸುವ ಕಾರ್ಯ ಆಗಬೇಕು ಎಂದರು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ಕೇಂದ್ರ ಸರಕಾರ ಜಲಜೀವನ ಮಿಷನ್‌ ಯೋಜನೆಯಡಿಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆ ನೀಡಿದೆ. ಇದಕ್ಕಾಗಿ 3.6 ಲಕ್ಷ ಕೋಟಿ ಹಣ ಮೀಸಲಿಡಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ದೇಶದಲ್ಲಿ 18.5ಕೋಟಿ ಮನೆಗಳಿಗೆ ನಲ್ಲಿ ಮೂಲಕ ನೀರು ನೀಡುವಗುರಿಯಿದೆ. ಜಿಲ್ಲೆಯಲ್ಲಿ ಜಲಜೀವನ ಮಿಷನ್‌ ಅಡಿ334 ಕೋಟಿ ರೂ. ವೆಚ್ಚದಲ್ಲಿ ಜಲಧಾರೆ ಯೋಜನೆ ಅನುಷ್ಠಾನ ಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಮಾತನಾಡಿ, ಹುಬ್ಬಳ್ಳಿ ಉಣಕಲ್ಲ ಕೆರೆ ಜಲಾನಯನಪ್ರದೇಶ ಗುರುತಿಸಿ ಕಾಪಾಡಿದ್ದರಿಂದ ಕೆರೆಯ ನೀರಿನ ಮೂಲ ಬತ್ತದೆ ಕೆರೆ ಉಳಿದುಕೊಂಡು ಬಂದಿದೆ.2050ರ ವೇಳೆಗೆ ಭಾರತದಲ್ಲಿ ನೀರಿನ ಬವಣೆಹೆಚ್ಚಾಗಬಹುದು. ಇದರಲ್ಲಿ ಹು-ಧಾ ಮಹಾನಗರವೂಒಂದು. ಇಂದಿನಿಂದಲೇ ಇದನ್ನು ತಪ್ಪಿಸುವ ಕಾರ್ಯಕ್ಕೆ ಎಲ್ಲರೂ ಮುಂದಾಗಬೇಕು ಎಂದರು.

Advertisement

ವಾಲ್ಮಿ ನಿರ್ದೇಶಕ ಡಾ| ರಾಜೇಂದ್ರ ಪೋದ್ದಾರ ಮಾತನಾಡಿ, ಮುಂದಿನ 10 ವರ್ಷಗಳಲ್ಲಿ ನಗರ,ಗ್ರಾಮಗಳು ನೀರಿನ ಸಮಸ್ಯೆ ಎದುರಿಸಲಿವೆ. ಈಗಲೇಎಚ್ಚೆತ್ತುಕೊಂಡು ಜಲಮೂಲಗಳ ಸಂರಕ್ಷಣೆ ಕೆಲಸಆಗಬೇಕು. ಜಲ ಸಂಕಷ್ಟ, ಜಲಮಾಲಿನ್ಯ ಕುರಿತುಜಾಗೃತಿ ಮೂಡಿಸುವ ಕೆಲಸ ಆಗಬೇಕು ಎಂದು ಹೇಳಿದರು.

ಪರಿಸರ ತಜ್ಞ ಪ್ರೊ| ಎಂ.ಬಿ. ಕುಮಾರಸ್ವಾಮಿ ಮಾತನಾಡಿದರು. ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ ಅಧ್ಯಕ್ಷ ಹಾಗೂ ಶಾಸಕ ಶಂಕರ ಪಾಟೀಲ ಮುನೇನ ಕೊಪ್ಪ, ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಮೋಹನ ಲಿಂಬಿಕಾಯಿ, ವಾಕರಸಾಸಂ ಅಧ್ಯಕ್ಷ ವಿ.ಎಸ್‌. ಪಾಟೀಲ, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷ ಎಸ್‌.ಐ. ಚಿಕ್ಕನಗೌಡ್ರ, ಹುಡಾ ಅಧ್ಯಕ್ಷ ಅಧ್ಯಕ್ಷ ನಾಗೇಶ ಕಲಬುರ್ಗಿ, ನಾಗರಾಜ ಗಂಗೊಳ್ಳಿ,ಗ್ರಾಮೀಣಾಭಿವೃದ್ಧಿ ಆಯುಕ್ತ ಅನಿರುದ್ಧ ಶ್ರವಣಇನ್ನಿತರರಿದ್ದರು. ಗ್ರಾಮೀಣಾಭಿವೃದ್ಧಿ ಇಲಾಖೆಯಪ್ರಧಾನ ಕಾರ್ಯದರ್ಶಿ ಎಲ್‌.ಕೆ. ಅತೀಕ್‌ ಪ್ರಾಸ್ತಾವಿಕ ಮಾತನಾಡಿದರು. ಜಿಲ್ಲಾಧಿಕಾರಿ ನಿತೇಶ ಪಾಟೀಲ ಸ್ವಾಗತಿಸಿದರು. ಜಿಪಂ ಸಿಇಒ ಡಾ| ಬಿ. ಸುಶೀಲಾ ಜಲಶಕ್ತಿ ಪ್ರತಿಜ್ಞಾವಿಧಿ  ಬೋಧಿಸಿದರು

Advertisement

Udayavani is now on Telegram. Click here to join our channel and stay updated with the latest news.

Next