Advertisement

ಲಖೀಂಪುರ್ ಖೇರಿ ಹಿಂಸಾಚಾರ ಕೇಸ್: ಸುಪ್ರೀಂಕೋರ್ಟ್ ಸಲಹೆ ಒಪ್ಪಿದ ಉತ್ತರಪ್ರದೇಶ ಸರ್ಕಾರ

07:59 PM Nov 15, 2021 | Team Udayavani |

ನವದೆಹಲಿ:ಲಖೀಂಪುರ್ ಖೇರಿ ಹಿಂಸಾಚಾರ ಪ್ರಕರಣದ ಎಸ್ ಐಟಿ ತನಿಖೆಯ ಬಗ್ಗೆ ಮೇಲ್ ವಿಚಾರಣೆ ನಡೆಸಲು ನಿವೃತ್ತ ನ್ಯಾಯಾಧೀಶರೊಬ್ಬರನ್ನು ನೇಮಕ ಮಾಡಬೇಕೆಂಬ ಸುಪ್ರೀಂಕೋರ್ಟ್ ಸಲಹೆಯನ್ನು ಒಪ್ಪಿರುವುದಾಗಿ ಉತ್ತರಪ್ರದೇಶ ಸರ್ಕಾರ ಸೋಮವಾರ (ನವೆಂಬರ್ 15) ತಿಳಿಸಿದೆ.

Advertisement

ಪ್ರಕರಣದ ತನಿಖೆಯನ್ನು ಕೆಳ ದರ್ಜೆಯ ಪೊಲೀಸ್ ಅಧಿಕಾರಿಗಳು ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಲು ಉನ್ನತ ಶ್ರೇಣಿಯ ಐಪಿಎಸ್ ಅಧಿಕಾರಿಗಳ ಹೆಸರನ್ನು ನೀಡುವಂತೆ ಸುಪ್ರೀಂಕೋರ್ಟ್ ಹೇಳಿದೆ.

ನೀವು ಯಾಕೆ ಐಪಿಎಸ್ ಅಧಿಕಾರಿಗಳ ಹೆಸರನ್ನು ಕೊಟ್ಟಿಲ್ಲ. ನಾವು ಐಪಿಎಸ್ ಶ್ರೇಣಿಯ ಅಧಿಕಾರಿಗಳನ್ನು ನೇಮಕ ಮಾಡಬೇಕೆಂದಿದ್ದೇವೆ. ಆದರೆ ಉತ್ತರಪ್ರದೇಶದವರಾಗಿರಬಾರದು. ನಾಳೆ ಸಂಜೆಯೊಳಗೆ ಹೆಸರನ್ನು ನೀಡುವಂತೆ ಸುಪ್ರೀಂಕೋರ್ಟ್ ಸಿಜೆಐ ಎನ್ ವಿ ರಮಣ ಸೂಚನೆ ನೀಡಿದ್ದಾರೆ.

ಸುಪ್ರೀಂಕೋರ್ಟ್ ಅಥವಾ ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯ ಪ್ರಗತಿಯನ್ನು ಪರಿಶೀಲಿಸಲು ರಾಜ್ಯ ಸರ್ಕಾರ ನೇಮಕ ಮಾಡಬೇಕೆಂಬ ಸಲಹೆಯನ್ನು ಒಪ್ಪಿಕೊಂಡಿರುವುದಾಗಿ ಹಿರಿಯ ವಕೀಲ ಹರೀಶ್ ಸಾಳ್ವೆ ತಿಳಿಸಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next