Advertisement

ಲಖಿಂಪುರ್ ಘಟನೆ ಬಿಜೆಪಿಗೆ ಧಕ್ಕೆ ತರುವುದಿಲ್ಲ : ಸ್ವತಂತ್ರ ದೇವ್ ಸಿಂಗ್

04:07 PM Oct 15, 2021 | Team Udayavani |

ಲಕ್ನೋ : ಲಖಿಂಪುರ್ ಖೇರಿ ಹಿಂಸಾಚಾರದಿಂದ 2022ರ ಯುಪಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಕುಗ್ಗಿಸಲು ಸಾಧ್ಯವಿಲ್ಲ ಎಂದು ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಹೇಳಿದ್ದಾರೆ.

Advertisement

ಮಾಧ್ಯಮಗಳ ಎದುರು ಮಾತನಾಡಿರುವ ಅವರು, ಲಖಿಂಪುರ್ ಖೇರಿ ಘಟನೆಯು 2022 ರಲ್ಲಿ ನಡೆಯಲಿರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಚುನಾವಣಾ ನಿರೀಕ್ಷೆಗಳ ಮೇಲೆ ಯಾವುದೇ ದುಷ್ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.

“ಈ ಘಟನೆ ಮುಂದಿಟ್ಟುಕೊಂಡು ಪ್ರತಿಪಕ್ಷಗಳು ರಾಜಕೀಯ ಲಾಭ ಮಾಡಿಕೊಳ್ಳಲು  ಪ್ರಯತ್ನಿಸುತ್ತಿವೆ, ಆದರೆ ಅದು ಬಿಜೆಪಿಯ ಪ್ರತಿಷ್ಠೆಯನ್ನು ಕುಗ್ಗಿಸುವಲ್ಲಿ ಯಶಸ್ವಿಯಾಗುವುದಿಲ್ಲ. ಲಖೀಂಪುರ ಘಟನೆ ಬಳಸಿಕೊಂಡು ವಿರೋಧ ಪಕ್ಷದವರು ರಾಜ್ಯದಲ್ಲಿ ಶಾಂತಿ ಕದಡುವ ಯತ್ನ ಮಾಡಬಹುದು. ಆದರೆ ಬಿಜೆಪಿಯ ಇಮೇಜ್‍ನ್ನು ಹಾಳು ಮಾಡಲು  ಸಾಧ್ಯವಿಲ್ಲ. ರಾಜ್ಯ ಸರ್ಕಾರವು ಈ ಪರಿಸ್ಥಿತಿಯನ್ನು ತ್ವರಿತವಾಗಿ ಮತ್ತು ಪ್ರಾಮಾಣಿಕವಾಗಿ ನಿಭಾಯಿಸಿದೆ ಮತ್ತು ತಕ್ಷಣವೇ ಈ ಬಗ್ಗೆ ಕಾರ್ಯಾಚರಣೆ ನಡೆಸಿ ಕ್ರಮ ಕೈಗೊಂಡಿದೆ” ಎಂದು ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ;-  ರೋಗಿಗಳಿಗೆ ನೀಡುವ ಹಾಲು ಮತ್ತು ಬ್ರೆಡ್ ಕದ್ದ ಗುತ್ತಿಗೆದಾರ!

ಮೋದಿ ಸರ್ಕಾರ ಮತ್ತು ಯೋಗಿ ಆದಿತ್ಯನಾಥ್ ಸರ್ಕಾರ ರೂಪಿಸಿರುವ ವಿವಿಧ ‘ರೈತ ಪರ’ ನೀತಿಗಳು ರಾಜ್ಯದ ರೈತ ಸಮುದಾಯಕ್ಕೆ ಲಾಭ ತಂದುಕೊಟ್ಟಿದೆ ಮತ್ತು ರೈತರಿಗೆ ಆಡಳಿತ ಪಕ್ಷದೊಂದಿಗೆ ನಿಕಟ ಬಾಂಧವ್ಯ ಸೃಷ್ಟಿಸಿದೆ ಎಂದು ಸಿಂಗ್ ಹೇಳಿದರು.

Advertisement

ಇನ್ನು ಬಿಜೆಪಿ ಈಗಾಗಲೇ ಲಖೀಂಪುರ ಘಟನೆಯಿಂದ ಪಕ್ಷಕ್ಕೆ ಆಗಬಹುದಾದ ಹಾನಿಯನ್ನು ನಿಯಂತ್ರಿಸಲು ಹಾಗು ಕ್ರಮ ಕೈಗೊಳ್ಳಲು ಆರಂಭಿಸಿದೆ. ಮತ್ತು ಬೂತ್ ಮಟ್ಟದಲ್ಲಿ ಪರಿಸ್ಥಿತಿಯನ್ನು ವಿವರಿಸಲು ಕಾರ್ಯಕರ್ತರಲ್ಲಿ ಹೇಳಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

“ಲಖಿಂಪುರ್ ಘಟನೆ ಕುರಿತು ವಿರೋಧ ಪಕ್ಷಗಳ ಪ್ರತಿಭಟನೆ ಕೇವಲ ರಾಜಕೀಯ ಲಾಭಕ್ಕಾಗಿ ಮಾತ್ರ. ಏಕೆಂದರೆ ಕಾಂಗ್ರೆಸ್ ನಂತಹ ಪಕ್ಷವು ರಾಜ್ಯದಲ್ಲಿ ಅತ್ಯಲ್ಪ ಅಸ್ತಿತ್ವವನ್ನು ಹೊಂದಿದೆ. ಇಂತಹ ಕುತಂತ್ರಗಳು ಚುನಾವಣೆಯಲ್ಲಿ ಕೆಲಸ ಮಾಡುವುದಿಲ್ಲ.”  ಎಂದು ಬಿಜೆಪಿ ಪಕ್ಷದ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರ ಕೈಗೊಂಡಿರುವ ವಿವಿಧ ಕ್ರಮಗಳ ಬಗ್ಗೆ ಹೇಳುತ್ತಾ ಪಕ್ಷದ ಕಾರ್ಯಕರ್ತರು ರೈತರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ರಾಜ್ಯ ಬಿಜೆಪಿ ಕಿಸಾನ್ ಮೋರ್ಚಾ ಅಧ್ಯಕ್ಷ ಕಾಮೇಶ್ವರ್ ಸಿಂಗ್ ಹೇಳಿದರು. ಕಿಸಾನ್ ಮೋರ್ಚಾ, ರೈತರನ್ನು ಒಗ್ಗೂಡಿಸುವ ಅಭಿಯಾನಗಳು ಮತ್ತು ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಮತ್ತು ಅದನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next