Advertisement

Gruha lakshmi ಚಾಲನೆ ಕಾರ್ಯಕ್ರಮಕ್ಕೆ ಲಕ್ಷ ಮಂದಿ ಸೇರುವ ನಿರೀಕ್ಷೆ: ಸಿಎಂ ಸಿದ್ದರಾಮಯ್ಯ

01:09 PM Aug 28, 2023 | Team Udayavani |

ಮೈಸೂರು: ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ಮೈಸೂರಿನ ಸರ್ಕಾರಿ ಅತಿಥಿ ಗೃಹದ ಆವರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಆಗಮಿಸಿದರು.

Advertisement

ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಸಿ ಮಹ್ದದೇವಪ್ಪ, ಜಿಲ್ಲಾಧಿಕಾರಿ ರಾಜೇಂದ್ರ ಸೇರಿದಂತೆ ಹಿರಿಯ ಅಧಿಕಾರಿಗಳು ಸಿದ್ದರಾಮಯ್ಯ ಅವರನ್ನು ಸ್ವಾಗತಿಸಿದರು. ಪೊಲೀಸರು ಗೌರವ ವಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದಿನಿಂದ ಮೂರು ದಿನಗಳ ಕಾಲ ಮೈಸೂರು ಪ್ರವಾಸ ಕೈಗೊಂಡಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವೆ ಸರ್ಕಾರ ಘೋಷಿಸಿದ 4 ನೇ ಗ್ಯಾರಂಟಿ ಗೃಹಲಕ್ಷ್ಮಿ ಯೋಜನೆಗೆ ಆ. 30 ರಂದು ಚಾಲನೆ ನೀಡಲಾಗುತ್ತಿದೆ. ಒಂದು ಲಕ್ಷಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಸೇರುತ್ತಿದ್ದಾರೆ ಎಂದು ತಿಳಿಸಿದರು.

ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಿಂದ ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮಕ್ಕೆ ಆಗಮಿಸುವರು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next