Advertisement

ಉಡುಪಿ ಲಕ್ಷದೀಪೋತ್ಸವ ಆರಂಭ: ಸಾವಿರಾರು ಹಣತೆ ದೀಪಗಳಿಂದ ಕಂಗೊಳಿಸಿದ ರಥಬೀದಿ ಪರಿಸರ

09:19 AM Nov 06, 2022 | Team Udayavani |

ಉಡುಪಿ : ಶ್ರೀಕೃಷ್ಣ ಮಠದಲ್ಲಿ ಶನಿವಾರ ಉತ್ಥಾನದ್ವಾದಶಿಯಂದು ಬೆಳಗ್ಗೆ ತುಳಸೀಪೂಜೆ, ಸಂಜೆ ಕ್ಷೀರಾಬ್ದಿ ಪೂಜೆ ನಡೆದ ಬಳಿಕ ತೆಪ್ಪೋತ್ಸವ ಸಹಿತ ಲಕ್ಷದೀಪೋತ್ಸವ, ವಾರ್ಷಿಕ ರಥೋತ್ಸವ ಆರಂಭಗೊಂಡಿತು.

Advertisement

ಅಪರಾಹ್ನ ರಥಬೀದಿಯಲ್ಲಿ ಅಳವಡಿಸಿದ ದಳಿಗಳ ಮೇಲೆ ಗೋಮಯವನ್ನು ಇಟ್ಟು ಅದರ ಮೇಲೆ ಹಣತೆ ಇಡುವ ಮುಹೂರ್ತವನ್ನು ಸ್ವಾಮೀಜಿಯವರು ನಡೆಸಿದರು.

ಸಂಜೆ ಮಧ್ವಸರೋವರದ ಮಧ್ಯದ ಮಂಟಪದಲ್ಲಿ ಕ್ಷೀರಾಬ್ಧಿ ಅರ್ಘ್ಯವನ್ನು ನೀಡಲಾಯಿತು. ಪೂಜೆಯಲ್ಲಿ ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು, ಪಲಿಮಾರು ಹಿರಿಯ, ಕಿರಿಯ, ಪೇಜಾವರ, ಕಾಣಿಯೂರು, ಅದಮಾರು ಕಿರಿಯ ಮಠಾಧೀಶರು ಪಾಲ್ಗೊಂಡರು.

ರಾತ್ರಿ ಆಕರ್ಷಕ ತೆಪ್ಪೋತ್ಸವ ನಡೆಯಿತು. ಇದೇ ವೇಳೆ ರಥಬೀದಿ, ಮಧ್ವಸರೋವರದಲ್ಲಿ ಸಾವಿರಾರು ಹಣತೆಗಳ ದೀಪಗಳು ಕಂಗೊಳಿಸಿದವು. ತೆಪ್ಪೋತ್ಸವದ ಬಳಿಕ ರಥೋತ್ಸವ ನಡೆಯಿತು. ಚಾತುರ್ಮಾಸ್ಯವ್ರತ ಮುಗಿದ ಬಳಿಕ ಇದೇ ಮೊದಲ ಉತ್ಸವವಾಗಿದ್ದು ಶ್ರೀಕೃಷ್ಣ-ಮುಖ್ಯಪ್ರಾಣ ಮತ್ತು ಶ್ರೀ ಅನಂತೇಶ್ವರ-ಚಂದ್ರಮೌಳೀಶ್ವರ ದೇವಸ್ಥಾನದ ಉತ್ಸವ ಮೂರ್ತಿಗಳನ್ನು ಮಹಾಪೂಜೆ ರಥ ಮತ್ತು ಗರುಡ ರಥದಲ್ಲಿರಿಸಿ ರಥೋತ್ಸವ ನಡೆಯಿತು.

ಬೆಳಗ್ಗೆ ಕೃಷ್ಣಾಪುರ ಸ್ವಾಮೀಜಿಯವರು ಮಹಾಪೂಜೆ ಬಳಿಕ ತುಳಸಿ ಪೂಜೆಯನ್ನು ನಡೆಸಿದರು. ನ. 8ರ ವರೆಗೆ ನಿತ್ಯ ಲಕ್ಷದೀಪೋತ್ಸವ ನಡೆಯಲಿದೆ.

Advertisement

ಇದನ್ನೂ ಓದಿ : ಇಂಡಿಯನ್‌ ಡಿಜಿಟಲ್‌ ಯುನಿವರ್ಸಿಟಿ ಮೂಲಕ 15 ಲಕ್ಷ ಶಿಕ್ಷಕರಿಗೆ ತರಬೇತಿ

Advertisement

Udayavani is now on Telegram. Click here to join our channel and stay updated with the latest news.

Next