Advertisement

ಗಡಿ ವಿಚಾರದಲ್ಲಿ ಠಾಕ್ರೆ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ: ಲಕ್ಷ್ಮಣ ಸವದಿ

10:04 AM Jan 07, 2020 | keerthan |

ಬೆಳಗಾವಿ: ಉದ್ಧವ್ ಠಾಕ್ರೆ ಒಬ್ಬ ಮುಖ್ಯಮಂತ್ರಿಯಾಗಿ ಗಡಿ ವಿವಾದ ಬಗ್ಗೆ ಅವಿವೇಕತನದ ಹೇಳಿಕೆ ನೀಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿರುಗೇಟು ನೀಡಿದರು.

Advertisement

ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಗಳು ಗಡಿ ವಿಚಾರದಲ್ಲಿ ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ವಾಗ್ದಾಳಿ ನಡೆಸಿದರು.

ಗಡಿ ವಿವಾದ ಮುಗಿದ ಅಧ್ಯಾಯ. ಇದರ ಬಗ್ಗೆ ವಿನಾಕಾರಣ ಹೇಳಿಕೆ ನೀಡುವುದು ಸೂಕ್ತವಲ್ಲ ಎಂದ ಅವರು, ಪ್ರಚೋದಕ ಹೇಳಿಕೆ ನೀಡಿದ ಮಾತ್ರಕ್ಕೆ ಬೆಳಗಾವಿ ಅವರಿಗೆ ಸೇರುವುದಿಲ್ಲ. ಇದು ಎಂದೆಂದಿಗೂ ಕರ್ನಾಟಕದ ಮುಖ್ಯ ಭಾಗವಾಗಿಯೇ ಇರುತ್ತದೆ ಎಂದರು.

ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಕರಣವಿದೆ. ರಾಜ್ಯದ ಪರ ತೀರ್ಪು ಬರುವ ವಿಶ್ವಾಸವಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next