Advertisement

ಖಾಸಗಿ ಅಂಬುಲೆನ್ಸ್ ಗಳನ್ನು ಬಳಸಿಕೊಳ್ಳುವ ಕುರಿತು ಲಕ್ಷ್ಮಣ ಸವದಿ-ಸುಧಾಕರ್ ಸಭೆ

10:57 AM May 10, 2021 | Team Udayavani |

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಇದೇ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಇಂದು ಲಕ್ಷ್ಮಣ ಸವದಿ ಅವರು ತಮ್ಮ ಬೆಂಗಳೂರು ನಿವಾಸದಲ್ಲಿ ಆರೋಗ್ಯ ಸಚಿವರಾದ ಡಾ. ಸುಧಾಕರ್ ಅವರೊಂದಿಗೆ ಸಭೆ ನಡೆಸಿದರು.

Advertisement

ಕೋವಿಡ್ ನಿಯಂತ್ರಣದ ಉದ್ದೇಶದಿಂದ ಖಾಸಗಿ ಅಂಬುಲೆನ್ಸ್ ಗಳನ್ನು ಬಳಸಿಕೊಳ್ಳುವ ಕುರಿತು ಮತ್ತು ಅವುಗಳಿಗೆ ಸೂಕ್ತ ದರವನ್ನು ನಿಗದಿಪಡಿಸಿ ಮಾರ್ಗಸೂಚಿ ಸಿದ್ಧಪಡಿಸುವ ಸಂಬಂಧ ಇಂದು ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರು ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಸಾರಿಗೆ ಆಯುಕ್ತರಾದ ಶಿವಕುಮಾರ್ ಮತ್ತಿತರ ಹಿರಿಯ ಅಧಿಕಾರಿಗಳು  ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next