Advertisement

ಹುಣಸೂರು: ಲಕ್ಷ್ಮಣತೀರ್ಥ ನದಿಗೆ ಬಿದ್ದು ರೈತ ಸಾವು

07:23 PM Jan 05, 2023 | Team Udayavani |

ಹುಣಸೂರು: ನದಿಯಲ್ಲಿ ಹಸು ತೊಳೆಯಲು ತೆರಳಿದ್ದ ರೈತನೊರ್ವ ಕಾಲುಜಾರಿ ಬಿದ್ದು ಸಾವನ್ನಪ್ಪಿರುವ ತಾಲೂಕಿನ ವಡ್ಡಂಬಾಳು ಗ್ರಾಮದಲ್ಲಿ ಬುಧವಾರ ನಡೆದಿದೆ.

Advertisement

ಹುಣಸೂರು ತಾಲೂಕಿನ ವಡ್ಡಂಬಾಳು ಗ್ರಾಮದ ಮಲ್ಲಶೆಟ್ಟರ ಪುತ್ರ ಮಹದೇವಶೆಟ್ಟಿ(೪೬) ಸಾವನ್ನಪ್ಪಿದವರು. ಇವರಿಗೆ ಪತ್ನಿ, ಇಬ್ಬರು ಗಂಡು ಮಕ್ಕಳಿದ್ದಾರೆ.

ರೈತ ಮಹದೇವಶೆಟ್ಟಿ ಬುಧವಾರ ಬೆಳಗ್ಗೆ ಎಂದಿನಂತೆ ಗ್ರಾಮದ ಬಳಿಯ ಲಕ್ಷ್ಮಣತೀರ್ಥ ನದಿಗೆ ಹಸು ತೊಳೆಯಲು ತೆರಳಿದ್ದರು. ಈ ವೇಳೆ ಕಾಲುಜಾರಿ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ. ಸಂಜೆಯಾದರೂ ಮನೆಗೆ ಬರದಿದ್ದರಿಂದ ಕುಟುಂಬದವರು ನದಿಬಳಿ ತೆರಳಿ ನೋಡಿದಾಗ ಸಾವನ್ನಪ್ಪಿರುವುದು ಪತ್ತೆಯಾಗಿದೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗುರುವಾರ ಮರಣೋತ್ತರ ಪರೀಕ್ಷೆ ನಂತರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು.

ಇದನ್ನೂ ಓದಿ: ನಿರುದ್ಯೋಗದ ಕಾರಣ ಯುವಕರಿಗೆ ವಧು ಸಿಗುತ್ತಿಲ್ಲ : ಶರದ್‌ ಪವಾರ್‌

Advertisement

Udayavani is now on Telegram. Click here to join our channel and stay updated with the latest news.

Next