Advertisement

ಹೆಣ್ಣು ಮರಿಗೆ ಜನ್ಮ ನೀಡಿದ ಧರ್ಮಸ್ಥಳದ ಲಕ್ಷ್ಮೀ ಆನೆ

10:41 AM Jul 01, 2020 | keerthan |

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ್ಮೀ ಹೆಸರಿನ ಆನೆ ಇಂದು ಮುಂಜಾನೆ ಹೆಣ್ಣು ಮರಿಗೆ ಜನ್ಮ ನೀಡಿದೆ.

Advertisement

ಮಾವುತರು ಆನೆ ಮರಿಗೆ ಉಪಚಾರ ನಡೆಸುತ್ತಿದ್ದು, ಆನೆ ಮರಿ ಆರೋಗ್ಯವಾಗಿದೆ ಎನ್ನಲಾಗಿದೆ.

ಸಚಿವ ಆನಂದ್ ಸಿಂಗ್ ಅವರು ಧರ್ಮಸ್ಥಳಕ್ಕೆ ಈ ಆನೆಯನ್ನು ನೀಡಿದ್ದರು. ತುಂಟಾಟದಿಂದ ಧರ್ಮಸ್ಥಳದಲ್ಲಿ ಲಕ್ಷ್ಮೀ ಅಚ್ಚುಮೆಚ್ಚಾಗಿತ್ತು. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ಪ್ರೀತಿ ಪಾತ್ರವಾಗಿತ್ತು. ವೀರೇಂದ್ರ ಹೆಗ್ಗಡೆಯವರು ಇಂದು ಆನೆ ಮರಿಯನ್ನು ವೀಕ್ಷಿಸಿ ಮುದ್ದಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next