Advertisement

ತಲೆ ಕೆಟ್ಟಿದೆಯಾ?ಲಕ್ಷ್ಮೀ ಹೆಬ್ಬಾಳ್‌ಕರ್‌ ಬಿಜೆಪಿಗೆ ಬೇಡ : ಬಿಎಸ್‌ವೈ ಕಿಡಿ

09:47 AM Jul 15, 2019 | Vishnu Das |

ಬೆಂಗಳೂರು : ಕಾಂಗ್ರೆಸ್‌ ಶಾಸಕಿ ಲಕ್ಷ್ಮೀ ಹೆಬ್ಬಾಳ್‌ಕರ್‌ ಅವರು ಬಿಜೆಪಿ ಸೇರ್ಪಡೆಯಾಗಲು ಮುಂದಾಗಿದ್ದಾರೆ ಎನ್ನುವ ಸುದ್ದಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಭಾನುವಾರ ಸಾರಾಸಗಟಾಗಿ ತಳ್ಳಿಹಾಕಿದ್ದು, ಏನು ತಲೆ ಕೆಟ್ಟಿದೆಯಾ ಎಂದು ಕಿಡಿ ಕಾರಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಎಲೆಕ್ಟ್ರಾನಿಕ್‌ ಮಾಧ್ಯಮಗಳಲ್ಲಿ ಲಕ್ಷ್ಮೀ ಹೆಬ್ಬಾಳ್‌ಕರ್‌ ಅವರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದೆ. ಅದು ಸುಳ್ಳು. ಪಾಪ ಅವರು ನಮ್ಮನ್ನೂ ಸಂಪರ್ಕಿಸಿಯೂ ಇಲ್ಲ. ಅವರ ಕಾರಣದಿಂದಾಗಿಯೇ ಶಾಸಕರು ಮುಂಬಯಿ ಹೋಗಿರುವುದು . ಏನು ತಲೆ ಕೆಟ್ಟಿದೆಯಾ ಎಂದು ಕಿಡಿ ಕಾರಿದರು.

ಸುದ್ದಿ ವಾಹಿನಿಗಳಲ್ಲಿ ಲಕ್ಷ್ಮೀ ಹೆಬ್ಬಾಳ್‌ಕರ್‌ ಅವರು ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದು, ಪಕ್ಷ ಸೇರ್ಪಡೆ ಕುರಿತಾಗಿ ಚರ್ಚೆ ನಡೆಸಿದ್ದರು ಎಂದು ವರದಿಯಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next