Advertisement

ಕೇಸ್‌ ಹಾಕಿದರೂ ನಾವು ಬಗ್ಗಲ್ಲ: ಲಕ್ಷ್ಮೀ ಹೆಬ್ಟಾಳಕರ್

03:50 PM Oct 19, 2020 | sudhir |

ಬೆಳಗಾವಿ: ಎಲ್ಲ ರಂಗಗಳಲ್ಲಿ ವಿಫಲವಾಗಿರುವ ಬಿಜೆಪಿ ಸರ್ಕಾರಕ್ಕೆ ಮಹಿಳಾ ದನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ವಕ್ತಾರೆ ಲಕ್ಷ್ಮೀ ಹೆಬ್ಟಾಳಕರ್ ಹೇಳಿದರು. ರವಿವಾರ ಕಾಂಗ್ರೆಸ್‌ ಭವನದ ಅವರಣದಲ್ಲಿ ಕ್ಯಾಂಟೀನ್‌ ಉದ್ಘಾಟನಾ
ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರ
ದುರುಪಯೋಗಪಡಿಸಿಕೊಂಡು ಆರ್‌. ಆರ್‌.ನಗರದ ಕಾಂಗ್ರೆಸ್‌ ಅಭ್ಯರ್ಥಿ ಮಹಿಳೆ ಎಂಬ ಕಾರಣದಿಂದ ಕುಸುಮಾ ಅವರಿಗೆ ತೊಂದರೆ ಕೊಡಲು ಆರಂಭಿಸಿದೆ. ಆದರೆ ಇದಕ್ಕೆ ನಾವು ಬಗ್ಗುವುದಿಲ್ಲ.

Advertisement

ಶಿರಾ ಹಾಗೂ ಆರ್‌.ಆರ್‌.ನಗರ ಎರಡರಲ್ಲೂ ಕಾಂಗ್ರೆಸ್‌ ಪರ ವಾತಾವರಣ ಇದೆ. ಬಿಜೆಪಿ ಸರ್ಕಾರದ ಆಡಳಿತದಿಂದ ಜನ ಬೇಸತ್ತಿದ್ದಾರೆ. ಭ್ರಷ್ಟಾಚಾರ ಮಿತಿಮೀರಿದೆ. ಇದಕ್ಕೆ ಜನರೇ ಚುನಾವಣೆಯಲ್ಲಿ ಉತ್ತರ ನೀಡಲಿದ್ದಾರೆ ಎಂದರು.
ರಾಜ್ಯದಲ್ಲಿ ಕೊರೊನಾ ಹಾಗೂ ಭೀಕರ ಪ್ರವಾಹದಿಂದ ಜನರು ಬಹಳ ತೊಂದರೆಯಲ್ಲಿದ್ದಾರೆ. ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇದರ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಮೋದಿ ಸರ್ಕಾರ ಕೇವಲ ಘೋಷಣೆಗೆ ಸೀಮೀತವಾಗಿದೆ.

ಇದನ್ನೂ ಓದಿ:ಹೆಲ್ಮೆಟ್ ಹಾಕದೆ ವಾಹನ ಚಲಾಯಿಸಿದರೆ ಮೂರು ತಿಂಗಳು ಪರವಾನಗಿ ಅಮಾನತು!

ಲಾಕ್‌ಡೌನ್‌ ಬಳಿಕ ಪ್ರಧಾನಿ ಮೋದಿ 20 ಲಕ್ಷ ಕೋಟಿ ಪರಿಹಾರ ಪ್ಯಾಕೇಜ್‌ ಪ್ರಕಟ ಮಾಡಿದರು. ಅದರಲ್ಲಿ ಇದುವರೆಗೆ ಕರ್ನಾಟಕಕ್ಕೆ ಎಷ್ಟು ಹಣ ಬಂದಿದೆ ಎಂಬುದು ಯಾರಿಗೂ ಗೊತ್ತಿಲ್ಲ. ಸರ್ಕಾರ ಸಹ ಹೇಳುತ್ತಿಲ್ಲ ಎಂದರು. ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಕಾಂಗ್ರೆಸ್‌ನಿಂದ ಯಾರು ಅಭ್ಯರ್ಥಿಯಾಗಬೇಕು ಎಂಬುದರ ಬಗ್ಗೆ ಪಕ್ಷದ ಹೈಕಮಾಂಡ್‌ ನಿರ್ಧಾರ ಮಾಡುತ್ತದೆ. ಇದರ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡುವದಿಲ್ಲ. ಡಿಸೆಂಬರ್‌ನಲ್ಲಿ ನಡೆಯಲಿರುವ ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ತಮ್ಮ ಕುಟುಂಬದಿಂದ ಯಾರೊಬ್ಬರೂ ಸ್ಪರ್ಧೆ ಮಾಡುವುದಿಲ್ಲ.

ನಮ್ಮ ಕ್ಷೇತ್ರದಲ್ಲಿ ಇನ್ನೂ ಮಾಡುವ ಕೆಲಸಗಳು ಸಾಕಷ್ಟಿವೆ. ಈ ಹಿನ್ನೆಲೆಯಲ್ಲಿ ತಮ್ಮ ಸಹೋದರ ಅಥವಾ ಪುತ್ರ ಸೇರಿದಂತೆ ಯಾರೊಬ್ಬರೂ ಡಿಸಿಸಿ ಬ್ಯಾಂಕ್‌ ಚುನಾವಣೆಯ ಬಗ್ಗೆ ಆಸಕ್ತಿ ಹೊಂದಿಲ್ಲ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next