Advertisement

“ಲಕ್ಷ್ಯ’- ಹೀಗೊಂದು ಚಿತ್ರ ಸದ್ದಿಲ್ಲದೇ ತಯಾರಾಗಿದ್ದು, ಚಿತ್ರ ಇಂದು ಬಿಡುಗಡೆಯಾಗುತ್ತಿದೆ. ಬಹುತೇಕ ಉತ್ತರ ಕರ್ನಾಟಕದವರೇ ಸೇರಿ ನಿರ್ಮಿಸಿರುವ ಚಿತ್ರವಿದು. ರವಿ ಸಾಸನೂರ್‌ ಅವರು ಕಥೆ ಬರೆದು ನಿರ್ದೇಶನ ಮಾಡಿರುವ “ಲಕ್ಷ್ಯ’ ಚಿತ್ರ ನಿರ್ದೇಶನ ಮಾಡಿದ್ದಾರೆ.

Advertisement

ನೈಜ ಘಟನೆಗಳನ್ನು ಆಧರಿಸಿ ಒಂದು ಸೋಷಿಯಲ್‌ ಕಂಟೆಂಟ್‌ ಇಟ್ಟುಕೊಂಡು ನಿರ್ಮಾಣವಾದ ಚಿತ್ರವಿದು.ಚಿತ್ರದ ಬಗ್ಗೆ ಮಾತನಾಡುವ ರವಿ ಸಾಸನೂರು, “18 ವರ್ಷದ ನಂತರ ಪ್ರತಿಯೊಬ್ಬರ ಜೀವನದಲ್ಲೂ ನಡೆಯುವಂಥ ಘಟನೆಗಳೇ ಈ ಚಿತ್ರದಲ್ಲಿದ್ದು ಎಲ್ಲರಿಗೂ ಚಿತ್ರ ಕನೆಕ್ಟ್ ಆಗುತ್ತದೆ. ಚಿತ್ರದಲ್ಲಿ ಗೋಕಾಕ್‌ ಫಾಲ್ಸ್‌ ಅನ್ನು ವಿಭಿನ್ನವಾಗಿ ತೋರಿಸಿದ್ದೇವೆ. ಬೆಳಗಾವಿ, ಸಾಂಗ್ಲಿ, ಗೋಕಾಕ್‌ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಭ್ರಷ್ಟಾಚಾರದ ವಿಚಾರವನ್ನು ಇಟ್ಟುಕೊಂಡು ಮಾಡಿದಂತಹ ಕಮರ್ಷಿಯಲ್‌ ಚಿತ್ರವಿದು’ ಎಂದು ಹೇಳಿದರು.

ಇದನ್ನೂ ಓದಿ:ತಮಗಿಂತ ಚಿಕ್ಕ ಹುಡುಗನ ಜೊತೆ ಡೇಟಿಂಗ್ ಮಾಡುವ ಬಗ್ಗೆ ಹೇಳಿಕೊಂಡ ರಶ್ಮಿಕಾ

“ಮೂಡಲ ಮನೆ’ ಖ್ಯಾತಿಯ ಸಂತೋಷ್‌ ರಾಜ್‌ ಜಾವರೆ ಈ ಚಿತ್ರದ ನಾಯಕ ಹಾಗೂ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡಿದ್ದಾರೆ. “ದುಡ್ಡಿನ ಹಿಂದೆ ಬಿದ್ದಿರುವ ವ್ಯಕ್ತಿಯಿಂದ ಇತರರಿಗೆ ಯಾವರೀತಿ ಪರಿಣಾಮ ಬೀರುತ್ತೆ. ಅದು ಆತನಿಗೆ ಹೇಗೆ ತೊಂದರೆ ಆಗುತ್ತೆ ಎಂಬುದನ್ನು ತುಂಬಾ ಪರಿಣಾಮಕಾರಿಯಾಗಿ ಈ ಚಿತ್ರದಲ್ಲಿ ಹೇಳಲಾಗಿದೆ’ ಎಂದು ಸಂತೋಷರಾಜ್‌ ಜಾವರೆ ಹೇಳಿಕೊಂಡರು. ಕಿರುತೆರೆ ಧಾರಾವಾಹಿಗಳಲ್ಲಿ ನಟಿಸಿರುವ ನಿತಿನಾದ್ವಿ ಮತ್ತೂಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next