Advertisement

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಶಾಸಕ ಲಾಲಾಜಿ ಮೆಂಡನ್ ನೇಮಕ

04:59 PM Jul 27, 2020 | keerthan |

ಕಾಪು : ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಮೆಂಡನ್ ಅವರು ನೇಮಕವಾಗಿದ್ದಾರೆ.

Advertisement

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಈ ಸಂಬಂಧ ಆದೇಶ ಹೊರಡಿಸುವಂತೆ ಸೂಚನೆ ನೀಡಿದ್ದಾರೆ.

ಲಾಲಾಜಿ ಮೆಂಡನ್ ಅವರು ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಎರಡನೇ ಬಾರಿ ಶಾಸಕರಾದ ಅವಧಿಯಲ್ಲಿ ಕೊಂಕಣ್ ರೈಲ್ವೇ ಮಂಡಳಿ ನಿರ್ದೇಶಕರಾಗಿದ್ದರು. ಸದ್ಯ ಬಿಎಸ್ ವೈ ಸರಕಾರ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಒಟ್ಟು 24 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿದೆ. ಈ ಪೈಕಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಲಾಜಿ ಮೆಂಡನ್ ಅವರನ್ನು ಮಾತ್ರ ಆಯ್ಕೆಗೆ ಪರಿಗಣಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next