Advertisement

ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ! ಸಚಿವ ಸ್ಥಾನಕ್ಕೆ ಬ್ರೇಕ್

11:23 AM Nov 26, 2020 | sudhir |

ಕಾಪು : ಕರ್ನಾಟಕ ಮಾರ್ಕೆಟಿಂಗ್ ಕಮ್ಯುನಿಕೇಶನ್ ಮತ್ತು ಅಡ್ವಟೈಸಿಂಗ್ ನಿಗಮದ ಅಧ್ಯಕ್ಷರಾಗಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಅವರನ್ನು ಆಯ್ಕೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

Advertisement

ಮೂರು ಬಾರಿ ಶಾಸಕರಾಗಿರುವ ಅವರಿಗೆ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂಬ ಒತ್ತಡಗಳ ನಡುವೆಯೇ ಮುಖ್ಯಮಂತ್ರಿ ಯಡಿಯೂರಪ್ಪನವರು ನಿಗಮ ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನ ಕಲ್ಪಿಸಿ ಕೊಡುವ ಮೂಲಕ ಲಾಲಾಜಿ ಮೆಂಡನ್ ಅವರ ಸಚಿವ ಸ್ಥಾನದ ಆಕಾಂಕ್ಷಿತನಕ್ಕೆ ಬ್ರೇಕ್ ಹಾಕಿದೆ.

ಈ ಹಿಂದೆ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ಘೋಷಿಸಿದ ರಾಜ್ಯ ಸರ್ಕಾರ ಸಂಜೆ ವೇಳೆಗೆ ಆ ನೇಮಕಾತಿಯನ್ನು ತಡೆಹಿಡಿದಿತ್ತು.

ಇದೀಗ ಕರ್ನಾಟಕ ಮಾರ್ಕೆಟಿಂಗ್ ಅಧ್ಯಕ್ಷರನ್ನಾಗಿ ಆಯ್ಕೆ ಗೊಳಿಸುವ ಮೂಲಕ ಲಾಲಾಜಿ ಆರ್ ಮೆಂಡನ್ ಅವರಿಗೆ ವಿಶೇಷ ಸ್ಥಾನಮಾನ ದೊರಕಿಸಿಕೊಡುವ ಪ್ರಯತ್ನ ಮಾಡಿದೆ.

ಇದನ್ನೂ ಓದಿ:ನಿವಾರ್ ಅಬ್ಬರ: ಕರ್ನಾಟಕದಲ್ಲೂ ಭಾರಿ ಮಳೆ ಸಾಧ್ಯತೆ! ಹವಾಮಾನ ಇಲಾಖೆ ಎಚ್ಚರಿಕೆ

Advertisement
Advertisement

Udayavani is now on Telegram. Click here to join our channel and stay updated with the latest news.

Next