Advertisement

ಲಲಿತ್‌ ಮಹಲ್‌ ಮಾರಾಟಕ್ಕೆ ಬಿಡಲ್ಲ:ನಂಜರಾಜೇ ಅರಸ್‌

03:45 AM Jan 27, 2017 | |

ಬೆಂಗಳೂರು:ಮೈಸೂರಿನ ಪಾರಂಪರಿಕ “ಲಲಿತ ಮಹಲ್‌’ ಅನ್ನು  ಕೇಂದ್ರ ಸರ್ಕಾರ ಮಾರಾಟ ಮಾಡಲು ಮುಂದಾಗಿರುವುದಕ್ಕೆ ಇತಿಹಾಸ ತಜ್ಞ ನಂಜರಾಜೇ ಅರಸ್‌ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

Advertisement

ಉದಯವಾಣಿಯೊಂದಿಗೆ ಮಾತನಾಡಿದ ಅವರು, ಮೈಸೂರಿನ ಲಲಿತ್‌ ಮಹಲ್‌ ನಮ್ಮ ಪರಂಪರೆ ಮತ್ತು ಹೆಮ್ಮೆಯ ಪ್ರತೀಕವಾಗಿದೆ. ರಾಜ್ಯ ಸರ್ಕಾರ ಕೇಂದ್ರದ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಪ್ರವಾಸೋದ್ಯಮ ಸಚಿವರು ಶೀಘ್ರವೇ ಕೇಂದ್ರದ ನಿರ್ಧಾರಕ್ಕೆ ಪ್ರತಿರೋಧ ತೋರಿ ಪತ್ರ ಬರೆಯಬೇಕು ಎಂದು ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರ ತನ್ನದಲ್ಲದ ಆಸ್ತಿಯನ್ನು ಮಾರಾಟ ಮಾಡಲು ಮುಂದಾಗಿರುವುದು ಆಶ್ಚರ್ಯ ಮೂಡಿಸಿದೆ. ಮೈಸೂರಿನ ಪ್ರಜೆಗಳಾದ ನಮ್ಮ ಹೆಮ್ಮೆಯ ಮಹಲ್‌ ಯಾವುದೇ ಕಾರಣಕ್ಕೂ ಮಾರಾಟ ಮಾಡಲು ಅವಕಾಶ ಮಾಡಿಕೊಡುವುದಿಲ್ಲ. ಸಾಧ್ಯವಾದರೆ, ಇದರ ವಿರುದ್ಧ ನಾನು ವೈಯಕ್ತಿಕವಾಗಿ ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಲಲಿತ ಮಹಲ್‌ ಮಾರಾಟ ಪ್ರಯತ್ನದ ವಿರುದ್ಧ  ರಾಜ್ಯದ ಎಲ್ಲ ಸಂಸದರೂ ಸಹ ಧ್ವನಿ ಎತ್ತಬೇಕು. ಯಾವುದೇ ಕಾರಣಕ್ಕೂ ಮಾರಾಟ ಮಾಡದಂತೆ ಕೇಂದ್ರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next