Advertisement

ಲಾಲು ಯಾದವ್ ಭೇಟಿ ಮಾಡಿದ ಸಿಎಂ ನಿತೀಶ್ ಕುಮಾರ್

10:51 PM Jul 06, 2022 | Team Udayavani |

ಪಾಟ್ನಾ: ಅನಾರೋಗ್ಯದಿಂದ ಪಾಟ್ನಾದ ಆಸ್ಪತ್ರೆ ಸೇರಿರುವ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್‌ ಅವರನ್ನು ಬುಧವಾರ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Advertisement

ಅದಕ್ಕೂ ಮೊದಲು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಆಸ್ಪತ್ರೆಗೆ ಭೇಟಿ ನೀಡಿ ಲಾಲು ಆರೋಗ್ಯ ವಿಚಾರಿಸಿದ್ದಾರೆ.

“ಲಾಲು ಅವರಿಗೆ ಕಿಡ್ನಿ ಮತ್ತು ಹೃದಯದ ಸಮಸ್ಯೆ ಇರುವುದು ಎಲ್ಲರಿಗೂ ತಿಳಿದಿದೆ. ಅದಕ್ಕೆ ಅವರು ದೆಹಲಿಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೇ ಹಿನ್ನೆಲೆ ಅವರನ್ನು ದೆಹಲಿಗೆ ಸ್ಥಳಾಂತರಿಸಿದ್ದೇವೆ’ ಎಂದು ಲಾಲು ಅವರ ಪುತ್ರ ತೇಜಸ್ವಿ ಯಾದವ್‌ ತಿಳಿಸಿದ್ದಾರೆ.

ಸದ್ಯ ಲಾಲು ಆರೋಗ್ಯ ಸ್ಥಿರವಾಗಿರುವುದಾಗಿ ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next