Advertisement

ತಂದೆಯ ಜೀವ ಉಳಿಸಲು ಕಿಡ್ನಿ ದಾನ ಮಾಡಲು ಮುಂದಾದ ಲಾಲೂ ಪುತ್ರಿ

04:58 PM Nov 10, 2022 | Team Udayavani |

ಬಿಹಾರ : ಕಳೆದ ಹಲವು ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಲಾಲು ಪ್ರಸಾದ್ ಅವರ ಜೀವ ಉಳಿಸಲು ಅವರ ಸಿಂಗಾಪುರದ ಪುತ್ರಿ ರೋಹಿಣಿ ಆಚಾರ್ಯ ಮಹತ್ವದ ನಿರ್ಧಾರ ಕೈಗೊಂಡಿದ್ದು, ದೇಶದ ಎಲ್ಲ ಹೆಣ್ಣು ಮಕ್ಕಳಿಗೆ ಮಾದರಿಯಾಗಿದೆ. ವಾಸ್ತವವಾಗಿ, ರೋಹಿಣಿ ಆಚಾರ್ಯ ಅವರು ತಮ್ಮ ತಂದೆಗೆ ಮೂತ್ರಪಿಂಡವನ್ನು ದಾನ ಮಾಡಲು ನಿರ್ಧರಿಸಿದ್ದಾರೆ.

Advertisement

ಲಾಲು ಪ್ರಸಾದ್ ಯಾದವ್ ಅವರು ಹಲವು ಕಾಯಿಲೆಗಳಿಂದ ಬಳಲುತ್ತಿದ್ದು ಚಿಕಿತ್ಸೆಗಾಗಿ ಕೆಲವು ದಿನಗಳ ಹಿಂದೆ ಸಿಂಗಾಪುರಕ್ಕೆ ಹೋಗಿದ್ದರು.

ವರದಿಗಳ ಪ್ರಕಾರ, ಸಿಂಗಾಪುರದ ವೈದ್ಯರು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್‌ಗೆ ಮೂತ್ರಪಿಂಡ ಕಸಿ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದ ನಂತರ ರೋಹಿಣಿ ತನ್ನ ಒಂದು ಮೂತ್ರಪಿಂಡವನ್ನು ತನ್ನ ತಂದೆಗೆ ದಾನ ಮಾಡಲು ಮುಂದಾಗಿದ್ದರು. ಆದರೆ ಲಾಲು ಪ್ರಸಾದ್ ಆರಂಭದಲ್ಲಿ ರೋಹಿಣಿ ಅವರ ಪ್ರಸ್ತಾಪವನ್ನು ತಿರಸ್ಕರಿಸಿದರು. ಆದರೆ ರೋಹಿಣಿ ಅವರ ಒತ್ತಾಯದ ಮೇರೆಗೆ ಕಿಡ್ನಿ ಕಸಿಗೆ ಒಪ್ಪಿಗೆ ಸೂಚಿಸಿದ್ದಾರೆ.

ಸದ್ಯ ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲಾಲೂ ವೈದ್ಯರ ಹೇಳಿಕೆಯಂತೆ ನವೆಂಬರ್​ 20ರಿಂದ 24ರೊಳಗೆ ಅವರು ಮತ್ತೆ ಚಿಕಿತ್ಸೆಗೆ ಸಿಂಗಾಪುರಕ್ಕೆ ತೆರಳಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಟಿ20 ವಿಶ್ವಕಪ್‍ ಸೆಮಿಫೈನಲ್ : ಆಂಗ್ಲರಿಗೆ 169 ರನ್ ಗಳ ಗುರಿ ನೀಡಿದ ಟೀಮ್ ಇಂಡಿಯಾ

Advertisement
Advertisement

Udayavani is now on Telegram. Click here to join our channel and stay updated with the latest news.

Next