Advertisement

ಉದ್ಯೋಗಕ್ಕಾಗಿ ಜಮೀನು ಹಗರಣ: ಲಾಲು ಪುತ್ರ, ಪುತ್ರಿಗೆ ತನಿಖೆ ಬಿಸಿ

10:28 PM Mar 25, 2023 | Team Udayavani |

ನವದೆಹಲಿ: ರೈಲ್ವೇ ಇಲಾಖೆಯಲ್ಲಿ ಉದ್ಯೋಗಕ್ಕಾಗಿ ಜಮೀನು ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರದ ಡಿಸಿಎಂ ತೇಜಸ್ವಿ ಯಾದವ್‌ ಅವರು ಶನಿವಾರ ನವದೆಹಲಿಯಲ್ಲಿ ಸಿಬಿಐ ಪ್ರಧಾನ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.

Advertisement

ಅದಕ್ಕೂ ಮುನ್ನ ಮಾತನಾಡಿದ ಅವರು ಈ ವಿಚಾರದಲ್ಲಿ ತನಿಖೆಯನ್ನು ಸಮರ್ಥವಾಗಿ ಎದುರಿಸಲು ಕುಟುಂಬ ನಿರ್ಧರಿಸಿದೆ ಎಂದರು. ಈ ಪ್ರಕರಣದಲ್ಲಿ ತೇಜಸ್ವಿ ಅವರನ್ನು ಬಂಧಿಸುವುದಿಲ್ಲವೆಂದು ಇತ್ತೀಚೆಗೆ ದೆಹಲಿ ಹೈಕೋರ್ಟ್‌ಗೆ ಸಿಬಿಐ ಭರವಸೆ ನೀಡಿತ್ತು. ಇದೇ ವೇಳೆ, ರಾಜ್ಯಸಭಾ ಸದಸ್ಯೆ ಮತ್ತು ಲಾಲು ಯಾದವ್‌ ಪುತ್ರಿ ಮಿಸ್ಸಾ ಭಾರ್ತಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿತು.

Advertisement

Udayavani is now on Telegram. Click here to join our channel and stay updated with the latest news.

Next