Advertisement

Arrested: ನಕಲಿ ದಾಖಲೆ ಸೃಷ್ಟಿಸಿ ಭೂ ಕಬಳಿಕೆ; ಜೇಡ್ರಳ್ಳಿ ಕೃಷ್ಣಪ್ಪ ಸೇರಿ ಇಬ್ಬರ ಬಂಧನ

10:57 AM Feb 07, 2024 | Team Udayavani |

ಬೆಂಗಳೂರು: ನಕಲಿ ದಾಖಲೆಗಳ ಸೃಷ್ಟಿಸಿ ಹತ್ತಾರು ಜಮೀನುಗಳನ್ನು ದೋಚಲು ಸಂಚು ರೂಪಿಸಿದ ಆರೋಪದ ಮೇಲೆ ಜೇಡರಹಳ್ಳಿ ಕೃಷ್ಣಪ್ಪ ಮತ್ತು ಆತನ ಸಹಚರ ಗೋವಿಂದರಾಜು ಎಂಬಾತನನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ಆರೋಪಿಗಳ ವಿರುದ್ಧ ಸುಂಕದಕಟ್ಟೆ ನಿವಾಸಿ ಶಂಕರಪ್ಪ ಎಂಬವರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಂಗಳವಾರ ಆರೋಪಿ ಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಬೆಂಗಳೂರು ಉತ್ತರ ತಾಲೂಕು ಯಶವಂತಪುರ ಹೋಬಳಿ ಹೇರೋಹಳ್ಳಿ ಗ್ರಾಮದ ಸರ್ವೆ ನಂ 23ರಲ್ಲಿ ದೂರುದಾರ ಶಂಕರಪ್ಪ ಅವರ ಕುಟುಂಬಕ್ಕೆ ಸೇರಿದ ಪಿತ್ರಾರ್ಜಿತ 16 ಎಕರೆ 37 ಗುಂಟೆ ಜಮೀನು ಇದೆ. ಈ ಸಂಬಂಧ 1991ರಲ್ಲಿ ಶಂಕರಪ್ಪ ಅವರ ದಾಯಾದಿಯೊಬ್ಬರು ಹೈಕೋರ್ಟ್‌ನಲ್ಲಿ ಆಸ್ತಿ ಪಾಲು ಕೇಳಿ ದಾವೆ ಹೂಡಿದ್ದು, ಈ ಸಂಬಂಧ ವಿಚಾರಣೆ ನಡೆಯುತ್ತಿದೆ. ಈ ಮಧ್ಯೆ ಆರೋಪಿ ಜೇಡರಹಳ್ಳಿ ಕೃಷ್ಣಪ್ಪ ಮತ್ತು ಅವರ ಸಹಚರರು ತಮ್ಮ ಕುಟುಂಬರಸ್ಥರಲ್ಲದ ವ್ಯಕ್ತಿಗಳ ಮೂಲಕ ಆರೋಪಿಗಳು ತಮ್ಮ ಹೆಸರಿಗೆ ನೋಂದಣಿ ಮಾಡಿಸಿಕೊಂಡು, ನಾಗರಬಾವಿಯ ಸಬ್‌ ರಿಜಿಸ್ಟ್ರಾರ್‌ ಕಚೇರಿಯಲ್ಲಿ ಕ್ರಯ ಪತ್ರ ಮಾಡಿಸಿಕೊಂಡು ವಂಚಿಸಿದ್ದಾರೆ ಎಂದು ದೂರು ನೀಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next