Advertisement

ನಿವೇಶನ ಖರೀದಿ: ವಂಚನೆ ತಡೆಗಟ್ಟಲು ಏಜೆನ್ಸಿ: ಸಚಿವ ಆರ್‌.ಅಶೋಕ್‌

08:46 PM Aug 26, 2022 | Team Udayavani |

ಬೆಂಗಳೂರು: ನಿವೇಶನ, ಭೂಮಿ ಕೊಳ್ಳುವವರು ಮೋಸದ ಜಾಲಕ್ಕೆ ಸಿಲುಕದಂತೆ ರಕ್ಷಿಸಲು ಸರ್ಕಾರವೇ ಏಜೆನ್ಸಿಯೊಂದನ್ನು ಸ್ಥಾಪಿಸಲು ಚಿಂತನೆ ನಡೆಸಿದೆ. ಹೀಗೆಂದು ಕಂದಾಯ ಸಚಿವ ಆರ್‌.ಅಶೋಕ್‌ ತಿಳಿಸಿದ್ದಾರೆ.

Advertisement

ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಏಜೆನ್ಸಿಯು ಭೂಮಿ, ನಿವೇಶನ ಮಾರುವವರು ಮತ್ತು ಕೊಳ್ಳುವವರ ನಡುವೆ ಮಧ್ಯವರ್ತಿಯಾಗಿ ಕೆಲಸ ಮಾಡಲಿದೆ. ಮಾರಾಟ ಮಾಡುವವರ ಬಳಿ ದಾಖಲೆ ಪಡೆದು, ಅದರ ಅಸಲಿಯತ್ತು ಪರೀಕ್ಷಿಸಿ ಒಡೆತನ ಯಾರದ್ದು ಎಂದು ಸ್ಪಷ್ಟಪಡಿಸಿಕೊಳ್ಳುತ್ತದೆ. ನಂತರ ಕೊಳ್ಳುವವರಿಗೆ ಗ್ರೀನ್‌ ಸಿಗ್ನಲ್‌ ನೀಡಲಿದೆ ಎಂದು ತಿಳಿಸಿದರು. ವಂಚನೆ ತಡೆಗಟ್ಟುವುದು ಇದರ ಮೂಲ ಉದ್ದೇಶ ಎಂದು ಹೇಳಿದ್ದಾರೆ.

ಕೇಂದ್ರಕ್ಕೆ ಪ್ರಸ್ತಾವನೆ: ರಾಜ್ಯದಲ್ಲಿ ಮಳೆ-ಪ್ರವಾಹದಿಂದ ಉಂಟಾದ ಹಾನಿ ಹಿನ್ನೆಲೆಯಲ್ಲಿ 1,102 ಕೋಟಿ ರೂ. ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಪರಿಹಾರ ಕೋರುವ ಸಂಬಂಧ ಮನವಿ ಪತ್ರ ಸಿದ್ಧವಾಗಿದೆ.

ಹಾನಿಗೊಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕಳುಹಿಸಿರುವ ವರದಿ ಆಧಾರದ ಮೇಲೆ 1,102 ಕೋಟಿ ರೂ. ಪರಿಹಾರ ಕೋರಲು ನಿರ್ಧರಿಸಲಾಗಿದೆ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next