Advertisement

ಮಣಿಪಾಲದಲ್ಲಿ ಗುಡ್ಡ ಕುಸಿತ; ಅಪಾಯಕಾರಿ ಸ್ಥಿತಿಯಲ್ಲಿ ಗುಡ್ಡ

04:51 PM Jul 04, 2023 | Team Udayavani |

ಉಡುಪಿ: ಉಡುಪಿಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಮಣಿಪಾಲದಲ್ಲಿ ಗುಡ್ಡ ಕುಸಿತ ಉಂಟಾದ ಘಟನೆ ನಡೆದಿದೆ.

Advertisement

ಸಿಂಡಿಕೇಟ್ ಸರ್ಕಲ್‌ನಿಂದ ಲಕ್ಷ್ಮೀಂದ್ರ ನಗರಕ್ಕೆ ತೆರಳುವ ರಸ್ತೆ ಬದಿಯಲ್ಲಿ ಗುಡ್ಡದ ಕೆಳಭಾಗದಲ್ಲಿ ಮತ್ತೆ ಕುಸಿತ ಉಂಟಾಗಿದೆ. ಮಣಿಪಾಲದಿಂದ ಉಡುಪಿ ಭಾಗಕ್ಕೆ ಹಲವಾರು ವಾಹನಗಳು ಸಂಚರಿಸುತ್ತಿದ್ದು, ಈ ಗುಡ್ಡ ಅಪಾಯಕಾರಿ ಸ್ಥಿತಿಯಲ್ಲಿದೆ.

ಮೇಲ್ಬಾಗದಲ್ಲಿ ತುಸು ಅನತಿ ದೂರದಲ್ಲಿ ಮನೆಯೊಂದಿದೆ. ಈ ಬಗ್ಗೆ ಸ್ಥಳಿಯಾಡಳಿತ ಸೂಕ್ತ ಕ್ರಮ ತೆಗೆದುಕೊಳ್ಳದಿದ್ದರೆ ಗುಡ್ಡ ಕುಸಿದು ರಸ್ತೆಗೆ ಬೀಳುವ ಅಪಾಯವೂ ಎದುರಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next