Advertisement

ಭೂ ಪರಿವರ್ತನೆ ಸರಳೀಕರಣದಿಂದ ಅಲೆದಾಟ ತಪ್ಪಲಿದೆ: ಆರ್‌.ವಿ. ದೇಶಪಾಂಡೆ

06:50 AM Dec 06, 2018 | |

ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಕೃಷಿ ಬಳಕೆಯಿಂದ ಕೃಷಿಯೇತರ ಬಳಕೆಗೆ ಭೂ ಪರಿವರ್ತನೆ ಪ್ರಕ್ರಿಯೆ ಸರಳೀಕರಣಕ್ಕೆ ನಿಯಮಾವಳಿಗೆ ತಿದ್ದುಪಡಿ ತರಲು ತೀರ್ಮಾನ ಕೈಗೊಂಡಿರುವುದರಿಂದ ಅನಗತ್ಯವಾಗಿ ಹಲವಾರು ಕಚೇರಿಗಳಿಗೆ ಅಲೆದಾಡುವುದು ತಪ್ಪಲಿದೆ ಎಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ತಿಳಿಸಿದ್ದಾರೆ.

Advertisement

ರಾಜ್ಯದಲ್ಲಿ ವಸತಿ, ಮೂಲಸೌಕರ್ಯ,  ಉದ್ಯಮ, ಸೌರವಿದ್ಯುತ್‌, ಪ್ರವಾಸೋದ್ಯಮ ಯೋಜನೆಗಳಿಗೆ ಭೂಮಿಯ ಅಗತ್ಯವಿದೆ. ಆದರೆ, ಭೂ ಪರಿವರ್ತನೆ ಪ್ರಕ್ರಿಯೆ ವಿಳಂಬ ಆಗುತ್ತಿದ್ದರಿಂದ ಸಾಕಷ್ಟು ಸಮಸ್ಯೆ ಉಂಟಾಗುತ್ತಿತ್ತು. ಆದರೆ, ಇದೀಗ ಸಂಪುಟದಲ್ಲಿ ಕೈಗೊಂಡ ತೀರ್ಮಾನದಿಂದ ಇಡೀ ಭೂ ಪರಿವರ್ತನೆ ಪ್ರಕ್ರಿಯೆ ಆನ್‌ಲೈನ್‌ ಮೂಲಕ ನಡೆಯಲಿದೆ. ನಾಡ ಕಚೇರಿ, ತಾಲೂಕು ಕಚೇರಿ, ಜಿಲ್ಲಾಧಿಕಾರಿಗಳ ಕಚೇೂಯಲ್ಲಿ ಭೂ ಪರಿವರ್ತನೆಗಾಗಿ ಆನ್‌ಲೈನ್‌ ಅರ್ಜಿ ಸಲ್ಲಿಸಬಹುದು.ಆರ್‌ಟಿಸಿ, ಮ್ಯುಟೇಶನ್‌ ಪತ್ರದ ನಕಲ, ಭಾಗಶಃ ಪರಿವರ್ತನೆಯಾಗಬೇಕಾದರೆ 11 ಇ ಸ್ಕೆಚ್‌, ಪ್ರಮಾಣಪತ್ರ ನೀಡಿದರೆ ಸಾಕು ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next