Advertisement

Shimoga ಜಮೀನು ಗಲಾಟೆ; ಕುಡಗೋಲಿನಿಂದ ಹಲ್ಲೆ ಮಾಡಿ ಹಾಡಹಗಲೇ ಸಂಬಂಧಿಯ ಕೊಲೆ

12:36 PM May 13, 2024 | keerthan |

ಶಿವಮೊಗ್ಗ: ಜಮೀನು ವಿವಾದದ ಗಲಾಟೆಯು ಕೊಲೆಯಲ್ಲಿ ಅಂತ್ಯವಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ತಾಲೂಕಿನ ದುಮ್ಮಳ್ಳಿಯಲ್ಲಿ ಸೋಮವಾರ ಹಾಡಹಗಲೇ ರಕ್ತ ಹರಿದಿದೆ.

Advertisement

ಸತೀಶ್ ನಾಯ್ಕ (28 ವ) ಕೊಲೆಯಾದ ದುರ್ದೈವಿ. ದೂರದ ಸಂಬಂಧಿ ಅಖಿಲೇಶ್ (27) ಸೇರಿದಂತೆ ಹಲವರ ಗುಂಪಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎಂದು ವರದಿಯಾಗಿದೆ.

ಕೊಲೆ ನಡೆದ ಜಮೀನು ಕಳೆದ ಹಲವಾರು ವರ್ಷಗಳಿಂದ ವಿವಾದದಲ್ಲಿತ್ತು. ನ್ಯಾಯಾಲಯವು ಈ ಜಮೀ‌ನಿನೊಳಗೆ ಯಾರೂ ಕೂಡ ತೆರಳದಂತೆ ಇಂಜಕ್ಷನ್ ಆದೇಶ ನೀಡಿತ್ತು.

ಇಂದು (ಮೇ 13) ಬೆಳಿಗ್ಗೆ ಸತೀಶ್ ನಾಯ್ಕ ಜಮೀನಿಗೆ ತೆರಳಿದ್ದರು. ಈ ವೇಳೆ ಅಖಿಲೇಶ್ ಗುಂಪಿನೊಂದಿಗೆ ಮಾತಿಗೆ ಮಾತು ಬೆಳೆದಿದೆ. ಸ್ಥಳದಲ್ಲಿದ್ದ ಕುಡುಗೋಲಿನಿಂದ ಮತ್ತು ಕೈಗಳಿಂದ ಗುಂಪು ಹಲ್ಲೆ ಮಾಡಿದೆ. ಪರಿಣಾಮ ಸತೀಶ್ ನಾಯ್ಕ ಕೊಲೆಯಾಗಿದೆ.

ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next