Advertisement

ಭೂ ಕಬಳಿಕೆ ಪ್ರಕರಣ: ಬೈರತಿ, ಆರ್‌. ಶಂಕರ್‌ ವಿರುದ್ಧದ ವಿಚಾರಣೆಗೆ ತಡೆ ಮುಂದುವರಿಕೆ

11:57 PM Jan 25, 2022 | Team Udayavani |

ಬೆಂಗಳೂರು: ಭೂ ಕಬಳಿಕೆ ಆರೋಪ ಪಕರಣಕ್ಕೆ ಸಂಬಂಧಿಸಿದಂತೆ ಸಚಿವ ಬೈರತಿ ಬಸವರಾಜ್‌ ಮತ್ತು ವಿಧಾನಪರಿಷತ್‌ ಸದಸ್ಯ ಆರ್‌. ಶಂಕರ್‌ ವಿರುದ್ಧದ ವಿಚಾರಣೆಗೆ ನೀಡಲಾಗಿದ್ದ ಮಧ್ಯಾಂತರ ತಡೆಯಾಜ್ಞೆಯನ್ನು ಹೈಕೋರ್ಟ್‌ ಫೆಬ್ರವರಿ 2ನೇ ವಾರದವರೆಗೆ ವಿಸ್ತರಿಸಿದೆ.ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ವಿಚಾರಣೆಯನ್ನು ಫೆಬ್ರವರಿ ಎರಡನೇ ವಾರಕ್ಕೆ ಮುಂದೂಡಿತು.

Advertisement

ಅಲ್ಲಿಯವರೆಗೂ ಅರ್ಜಿದಾರರ ವಿರುದ್ಧದ ನಗರದ 42ನೇ ಎಸಿಎಂಎಂ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿ 2021ರ ಡಿ.21ರಂದು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ವಿಸ್ತರಿಸಿತು.

ಭೂ ಕಬಳಿಕೆ ಆರೋಪ ಸಂಬಂಧ ತಮ್ಮ ವಿರುದ್ಧದ ಖಾಸಗಿ ದೂರನ್ನು ವಿಚಾರಣೆಗೆ ಅಂಗೀಕರಿಸಿ ಸಮನ್ಸ್‌ ಜಾರಿಗೊಳಿಸಿದ 42ನೇ ಎಸಿಎಂಎಂ ನ್ಯಾಯಾಲಯದ ಆದೇಶ ರದ್ದು ಕೋರಿ ಸಚಿವ ಭೈರತಿ ಬಸರವಾಜ್‌, ಶಾಸಕ ಆರ್‌.ಶಂಕರ್‌ ಮತ್ತು ಎ.ಎಂ. ಮಾದಪ್ಪ ಎಂಬುವರು ಹೈಕೋರ್ಟ್‌ಗೆ ಕ್ರಿಮಿನಲ್‌ ಅರ್ಜಿ ಸಲ್ಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next