Advertisement
ಬಳಿಕ ಮಾತನಾಡಿದ ಅವರು, ಉದ್ಯೋಗ ಖಾತರಿ ಯೋಜನೆಯಡಿ ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ, ಯಳಂದೂರು ಹಾಗೂ ಹನೂರು ತಾಲೂಕಿನ ಆಯ್ದ ಗ್ರಾಮಪಂಚಾಯಿತಿಗಳನ್ನು ಮಾದರಿ ಗ್ರಾಮ ಪಂಚಾಯಿತಿಗಳನ್ನಾಗಿ ಅಭಿವೃದ್ಧಿಪಡಿಸಲುಆಯ್ಕೆ ಮಾಡಿಕೊಳ್ಳಲಾಗಿದೆ. ಇನ್ನಷ್ಟು ಗ್ರಾಮ ಪಂಚಾಯಿತಿಗಳ ವಿಸ್ತರಣೆಯನ್ನು ಮುಂದಿನ ಹಂತದಲ್ಲಿ ಮಾಡಲಾಗುವುದು ಎಂದರು.
Related Articles
Advertisement
ಮಾದರಿ ಗ್ರಾಪಂನಲ್ಲಿ ಏನೇನು ಇರಲಿದೆ? : ಈ ಯೋಜನೆಯಡಿ ಗ್ರಾಮಗಳ ನೈರ್ಮಲ್ಯ, ಕೊಳಚೆ ನೀರಿನ ಸಮರ್ಪಕ ನಿರ್ವಹಣೆಗೆ ಸೋಕ್ಪಿಟ್ಗಳ ನಿರ್ಮಾಣ ಮಾಡಲಾಗುತ್ತದೆ. ಮನೆಯ ಹಿತ್ತಲಿನಲ್ಲಿ ಪೌಷ್ಟಿಕ ತೋಟ ನಿರ್ಮಾಣವು ಸಹ ಆಗಲಿದೆ. ಶಾಲೆಗಳಲ್ಲಿಯೂ ಪೌಷ್ಟಿಕ ತೋಟ ನಿರ್ಮಾಣವನ್ನು ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಹೊಸ ಕಾರ್ಯ ಚಟುವಟಿಕೆಗಳ ಬಗ್ಗೆ ಉತ್ಸಾಹತುಂಬಬಹುದಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು.
ಮಳೆ ನೀರು ಕೊಯ್ಲು ಸಹ ಯೋಜನೆಯಡಿ ಕೈಗೊಂಡಿರುವ ಪ್ರಮುಖ ಗುರಿಯಾಗಿದೆ. ವ್ಯರ್ಥವಾಗಿ ಹರಿದು ಹೋಗುವ ನೀರನ್ನು ಸಂಗ್ರಹಿಸಿ ಇತರೆ ಉದ್ದೇಶಗಳಿಗೆ ಬಳಸುವ ಹಿನ್ನೆಲೆಯಲ್ಲಿ ಮಳೆ ನೀರು ಕೊಯ್ಲು ಕಾಮಗಾರಿಯನ್ನು ಗ್ರಾಮ ಪಂಚಾಯಿತಿಗಳ ಸಮಗ್ರ ಅಭಿವೃದ್ಧಿ ಯೋಜನೆಯಡಿ ಕೈಗೊಳ್ಳಲಾಗುತ್ತಿದೆ ಎಂದರು.