Advertisement

ವಿವಿಧ ಕಾಮಗಾರಿಗೆ ಭೂಮಿಪೂಜೆ

06:45 AM May 12, 2020 | Suhan S |

ಗೊರೇಬಾಳ: ಕೆ.ಹಂಚಿನಾಳ ಗ್ರಾಮದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ 25 ಲಕ್ಷ ರೂ.ಗಳಲ್ಲಿ ನಿರ್ಮಿಸಿದ ಕಲ್ಯಾಣ ಮಂಟಪವನ್ನು ಶಾಸಕ ವೆಂಕಟರಾವ್‌ ನಾಡಗೌಡ ಉದ್ಘಾಟಿಸಿದರು.

Advertisement

ಕೆ.ಬಸಾಪುರ ಗ್ರಾಮದಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ಕುಡಿಯುವ ನೀರಿನ ಪೈಪ್‌ಲೈನ್‌ ಕಾಮಗಾರಿಗೆ ಚಾಲನೆ ನೀಡಿದರು. ಕೆಂಗಲ್‌ ಗ್ರಾಮದಲ್ಲಿ 25 ಲಕ್ಷ ವೆಚ್ಚದಲ್ಲಿ ಸಿ.ಸಿರಸ್ತೆ, ಚರಂಡಿ ಲೋಕೋಪಯೋಗಿ ಇಲಾಖೆಯ ಅಪೆಂಡಿಕ್ಸ್‌-ಸಿ ಯೋಜನೆಯಲ್ಲಿ 3 ಕೋಟಿ ವೆಚ್ಚದಲ್ಲಿ ರಸ್ತೆ ಡಾಂಬರೀಕರಣಕ್ಕೆ ಭೂಮಿಪೂಜೆ ನೆರವೇರಿಸಿದರು. ದಿದ್ದಗಿ ಗ್ರಾಮದಲ್ಲಿ ಕುಡಿಯುವ ನೀರಿನ ಕೆರೆ ನಿರ್ಮಾಣ ಹಾಗೂ 25 ಲಕ್ಷ ರೂ. ವೆಚ್ಚದಲ್ಲಿ ಸಿ.ಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಚಾಲನೆ ನೀಡಿದರು.

ಕೆ.ಹಂಚಿನಾಳ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆ ವತಿಯಿಂದ 2 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಕಾಮಗಾರಿ ವೀಕ್ಷಿಸಿದರು. ಮುಖಂಡರಾದ ಬಸವರಾಜ ನಾಡಗೌಡ, ಎಸ್‌.ಲಿಂಗರಾಜ, ಶಂಭಣ್ಣ ಸಾಹುಕಾರ, ಎಸ್‌. ವೀರೇಶಪ್ಪ, ಟಿ.ವಿರೂಪಾಕ್ಷಗೌಡ, ಶರಣಪ್ಪ ಹೂಗಾರ, ಪಂಪಾರಡ್ಡಿ, ಮಲ್ಲೇಶಗೌಡ ಬಸಾಪೂರ, ಎಂ.ನಾಗೇಶ ಸೇರಿದಂತೆ ಇತರರು ಇದ್ದರು

Advertisement

Udayavani is now on Telegram. Click here to join our channel and stay updated with the latest news.

Next