Advertisement

ಶಿರಾಡಿ ಘಾಟ್ ನಲ್ಲಿ ಮತ್ತೆ ಭೂ‌ಕುಸಿತ: ಘನ ವಾಹನಗಳ ಸಂಚಾರ ಬಂದ್

12:30 PM Jul 14, 2022 | Team Udayavani |

ಸಕಲೇಶಪುರ:  ಶಿರಾಢಿಘಾಟ್‌ನಲ್ಲಿ ಮತ್ತೆ ಭೂಕುಸಿತವಾಗುತ್ತಿರುವ ಹಿನ್ನೆಲೆಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ ಎಂದು ಉಪವಿಭಾಗಾಧಿಕಾರಿ ಪ್ರತೀಕ್ ಬಯಾಲ್ ತಿಳಿಸಿದ್ದಾರೆ.

Advertisement

ಸಕಲೇಶಪುರ ತಾಲ್ಲೂಕಿನ ದೋಣಿಗಲ್ ಸಮೀಪ ವಾರದ ಹಿಂದೆ ಅಲ್ಪ ಪ್ರಮಾಣದಲ್ಲಿ ರಸ್ತೆ ಕುಸಿದಿತ್ತು. ರಸ್ತೆ ಕುಸಿದ ಸ್ಥಳಕ್ಕೆ ಭೇಟಿ ನೀಡಿದ ಲೋಕೋಪಯೋಗಿ ಸಚಿವ ಸಿ.ಸಿ ಪಾಟೀಲ್  ಪರಿಶೀಲನೆ ನಡೆಸಿದ್ದರು. ಸಚಿವರು ಭೇಟಿ ನೀಡಿದ ನಾಲ್ಕನೇ ದಿನಕ್ಕೆ ಮತ್ತೆ ಭೂಕುಸಿತವಾಗಿ ಅಪಾಯಕಾರಿ ಸ್ಥಿತಿ  ನಿರ್ಮಾಣವಾಗಿದೆ.

ಕಳೆದ ವರ್ಷ ಕೂಡ ಇದೇ ಸ್ಥಳದಲ್ಲಿ ರಸ್ತೆ ಕುಸಿದಿತ್ತು.ರಾಜಧಾನಿ ಬೆಂಗಳೂರು ಹಾಗೂ ಬಂದರು ನಗರಿ ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ಇಂದು ಮಧ್ಯಾಹ್ನದ ವೇಳೆಗೆ ಮತ್ತೆ ಭೂಕುಸಿತವಾಗಿದ್ದು, ಈ ಹಿನ್ನೆಲೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದ್ದು, ಲಘು ವಾಹನಗಳನ್ನು ಏಕ ಮುಖ ಸಂಚಾರದಂತೆ ಚಲಿಸಲು  ಅಧಿಕಾರಿಗಳು ಅವಕಾಶ ನೀಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಗಾಂಜಾ ವ್ಯಸನ ಮಾಡುತ್ತಿದ್ದ 7 ವಿದ್ಯಾರ್ಥಿಗಳ ಬಂಧನ

ಮಳೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮತ್ತೆ ಕುಸಿಯುತ್ತಿರುವ ರಸ್ತೆಯಿಂದ ಆತಂಕ ಹೆಚ್ಚಿದ್ದು ಗುತ್ತಿಗೆದಾರರ ಕಳಪೆ ಕಾಮಗಾರಿ ಹಾಗೂ ಕೇಂದ್ರ ಸರ್ಕಾರದ ನಿರ್ಲಕ್ಷ್ಯ ದಿಂದ ಈ ರೀತಿಯ ಘಟನೆ ಉಂಟಾಗಲು ಕಾರಣವಾಗಿದೆ ಎಂದು ಶಾಸಕ ಎಚ್.ಕೆ ಕುಮಾರಸ್ವಾಮಿ ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next