Advertisement

ಆಗುಂಬೆ ಘಾಟಿಯ ನಾಲ್ಕನೇ ತಿರುವಿನಲ್ಲಿ ಭೂಕುಸಿತ: ಸಂಚಾರ ಬಂದ್

10:52 AM Jul 10, 2022 | Team Udayavani |

ಹೆಬ್ರಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯ ಕಾರಣದಿಂದ ಆಗುಂಬೆ ಘಾಟಿಯ ಮೂರು ಮತ್ತು ನಾಲ್ಕನೇ ಸುತ್ತಿನ ಮಧ್ಯಭಾಗದಲ್ಲಿ ಭೂಕುಸಿತವಾಗಿದೆ. ಭಾರೀ ಪ್ರಮಾಣದ ಮಣ್ಣು ಮತ್ತು ಮರ ರಸ್ತೆಗೆ ಬಿದ್ದ ಕಾರಣ ಸಂಚಾರ ಸ್ಥಗಿತವಾಗಿದೆ.

Advertisement

ತಡರಾತ್ರಿ ಗುಡ್ಡ ಕುಸಿತದ ಪರಿಣಾಮ ರಾತ್ರಿಯಿಂದಲೇ ವಾಹನ ಸಂಚಾರ ಬಂದ್ ಆಗಿದ್ದು, ಶಿವಮೊಗ್ಗ ಆಗುಂಬೆಯಿಂದ ಉಡುಪಿಗೆ ಬರುವ ವಾಹನಗಳು ಸಿದ್ಧಾಪುರ ಮೂಲಕ ಬರುತ್ತಿದೆ.

ಇದನ್ನೂ ಓದಿ:ಕಾಣಿಯೂರು: ಬೈತಡ್ಕ ಸೇತುವೆಯಿಂದ ಕೆಳಕ್ಕೆ ಬಿದ್ದ ಕಾರು, ನೀರು ಪಾಲು ಶಂಕೆ

ಉಡುಪಿಯಿಂದ ಶಿವಮೊಗ್ಗಕ್ಕೆ ತೆರಳುವ ಬಸ್ಸು ಸೇರಿದಂತೆ ವಾಹನಗಳು ಮಾಹಿತಿ ಇಲ್ಲದೆ ತೆರಳಿ ಮರಳಿ ವಾಪಸ್ಸಾಗಿರುವ ಘಟನೆ ಕಂಡು ಬಂತು.

Advertisement

ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ .

ಸುನೀಲ್ ಕುಮಾರ್ ಸೂಚನೆ: ಆಗುಂಬೆ ಘಾಟಿಯ ಭೂಕಸಿತ ಸಂಭವಿಸಿದ ಸ್ಥಳದಲ್ಲಿ ತಕ್ಷಣ ಪರಿಹಾರ ಕಾರ್ಯ ಪ್ರಾರಂಭಿಸುವಂತೆ ಇಂಧನ ಸಚಿವ ವಿ.ಸುನೀಲ್ ಕುಮಾರ್ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.

ಘಟನೆ ಬಗ್ಗೆ ಮಾಹಿತಿ ಲಭಿಸುತ್ತಿದ್ದಂತೆ ಜಿಲ್ಲಾಧಿಕಾರಿಗೆ ದೂರವಾಣಿ ಕರೆ ಮಾಡಿ ಮಾತನಾಡಿರುವ ಅವರು, ಯಾವುದೇ ಅಹಿತಕರ ಘಟನೆಗೆ ಅವಕಾಶವಿಲ್ಲದಂತೆ ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಸೂಚನೆ ನೀಡಿದ್ದಾರೆ.

ರಾತ್ರಿಯಿಂದಲೇ‌ ಈ ಭಾಗದಲ್ಲಿ ಸಂಚಾರ ಸಮಸ್ಯೆ ಸೃಷ್ಟಿಯಾಗಿದ್ದು, ಸಂಜೆಯೊಳಗಾಗಿ ಯಥಾಸ್ಥಿತಿ ಕಾಪಾಡುವುದಕ್ಕೆ ಪ್ರಯತ್ನಿಸಿ ನಾಗರಿಕರಿಗೆ ಅನುಕೂಲ‌ ಕಲ್ಪಿಸುವಂತೆ ಸೂಚನೆ ನೀಡಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next