Advertisement

ಅಲೇಖಾನ್ ಬಳಿ ಬಿರುಕು ಬಿಟ್ಟ ಚಾರ್ಮಾಡಿ ಘಾಟ್ ರಸ್ತೆ: ವಾಹನ ಸಂಚಾರ ಮತ್ತೆ ಸ್ಥಗಿತ

03:10 PM Aug 07, 2020 | keerthan |

ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ 234 ರ ಮಧ್ಯ ಅಲೇಖಾನ್ ಸಮೀಪ ಘಾಟ್ ರಸ್ತೆ ಬಿರುಕು ಕಂಡು ಬಂದ ಕಾರಣ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರ ಮತ್ತೆ ಸ್ಥಗಿತವಾಗಿದೆ.

Advertisement

ಭಾರಿ ಮಳೆಯ ಕಾರಣದಿಂದ ಚಾರ್ಮಾಡಿ ಘಾಟಿಯ ಅಲ್ಲಲ್ಲಿ ಗುಡ್ಡ ಕುಸಿತವಾಗುತ್ತಿದೆ. ಮುಂಜಾನೆ ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಗುಡ್ಡ ಕುಸಿದಿದ್ದರಿಂದ ಸಂಚಾರ ಸ್ಥಿತವಾಗಿತ್ತು, ನಂತರ ತೆರವು ಕಾರ್ಯ ಪೂರ್ಣಗೊಳಿಸಿದ್ದು, ಪ್ರಸಕ್ತ ಅಲೇಖಾನ್ ಬಿರುಕಿನಿಂದ ಮತ್ತೆ ಸಂಚಾರಕ್ಕೆ ಸಂಚಕಾರ ಬಂದೊದಗಿದೆ.

ರಸ್ತೆಯಲ್ಲಿ ಭಾರೀ ಬಿರುಕು ಕಂಡು ಬಂದ ಹಿನ್ನಲೆ ಮುನ್ನಚ್ಚೆರಿಕಾ ಕ್ರಮವಾಗಿ ಘಾಟ್ ನಲ್ಲಿ ರಸ್ತೆ ಸಂಚಾರ ಸ್ಥಗಿತ ಮಾಡಲಾಗಿದೆ. ಚಾರ್ಮಾಡಿ ಚೆಕ್ ಪೋಸ್ಟ್, ಕೊಟ್ಟಿಗೆಹಾರ ಚೆಕ್ ಪೋಸ್ಟ್ ಬಂದ್ ಮಾಡಲಾಗಿದೆ. ವಾಹನಗಳು ಸಾಲುಗಟ್ಟಿ ನಿಂತಿವೆ.

ಇದನ್ನೂ ಓದಿ: ಶೃಂಗೇರಿಯ ಕುರುಬಗೆರೆಯಲ್ಲಿ ಸಿಲುಕಿದ 15 ಜನರ ರಕ್ಷಿಸಿದ ಎನ್ ಡಿಆರ್ ಎಫ್, ಎಎನ್ಎಫ್ ಸಿಬ್ಬಂದಿ

Advertisement

ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ವಿಭಾಗದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿನೆ ನಡೆಸುತ್ತಿದ್ದು, ಚಾರ್ಮಾಡಿ ಘಾಟ್ ಸಂಚಾರದ ಬಗ್ಗೆ ಇನ್ನಷ್ಟೇ ನಿರ್ಧಾರ ಮಾಡಬೇಕಿದೆ.

Advertisement

Udayavani is now on Telegram. Click here to join our channel and stay updated with the latest news.

Next