Advertisement

ಹಳಿಗೆ ಕುಸಿದ ಮಣ್ಣು: ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತ

09:18 AM Aug 07, 2019 | keerthan |

ಸುಬ್ರಹ್ಮಣ್ಯ: ಶಿರಾಡಿ ಘಾಟ್ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮಂಗಳೂರು-ಬೆಂಗಳೂರು ರೈಲು ಹಳಿಗೆ ಸಿರಿಬಾಗಿಲು ಹಾಗೂ ಇತರ 4 ಕಡೆ ಹಳಿಗೆ ಮಣ್ಣು ಕುಸಿದ ಪರಿಣಾಮ ರೈಲು ಸಂಚಾರ ಸ್ಥಗಿತಗೊಂಡಿದೆ.

Advertisement

ಮಂಗಳವಾರ ಬೆಳಗ್ಗೆ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಿಂದ ಸಕಲೇಶಪುರ ನಡುವಣ ರೈಲು ಹಳಿಯಲ್ಲಿ ಮಣ್ಣು ಕುಸಿತದ ಪರಿಣಾಮ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ.

ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಿಂದ ಸಕಲೇಶಪುರ ನಡುವಣ ರೈಲು ಹಳಿಯ 86 ನೇ ಕಿಮೀ ಹಾಗೂ 83 ಕಿಮೀ ಹಾಗೂ ಇತರ ಎರಡು ಕಡೆ ಸೇರಿದಂತೆ 4 ಕಡೆಗಳಲ್ಲಿ ಕುಸಿತವಾಗಿದೆ.

ಈವರೆಗೆ 86 ನೇ ಕಿಮೀ ಪ್ರದೇಶದ ಮಣ್ಣು ತೆರವು ಕಾರ್ಯ ಪೂರ್ತಿಗೊಂಡಿಲ್ಲ. ತುರ್ತು ಕಾರ್ಯದ ಹಿನ್ನೆಲೆಯಲ್ಲಿ 50 ಕ್ಕೂ ಅಧಿಕ ಕಾರ್ಮಿಕರು ಹಾಗೂ ಯಂತ್ರದ ಮೂಲಕ ಮಣ್ಣು ತೆರವು ಕಾರ್ಯ ನಡೆಯುತ್ತಿದೆ. ಮಳೆ ಸುರಿಯುತ್ತಿರುವ ಕಾರಣ ಕಾಮಗಾರಿ ಪ್ರಗತಿಗೆ ಅಡ್ಡಿಯಾಗಿದೆ.

ಮಧ್ಯಾಹ್ನದ ಎರಡೂ ರೈಲುಗಳ ಓಡಾಟ ಸ್ಥಗಿತವಾಗಿತ್ತು. ರಾತ್ರಿ ರೈಲು ಓಡಾಟವು ಸ್ಥಗಿತಗೊಳ್ಳುವ ಸಾದ್ಯತೆಗಳು ದಟ್ಟವಾಗಿವೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next