Advertisement

Train; ಎಡಕುಮೇರಿ ರೈಲು ಮಾರ್ಗದಲ್ಲಿ ಭೂಕುಸಿತ; ಇನ್ನೆರಡು ದಿನ ರೈಲು ಸಂಚಾರ ಸ್ಥಗಿತ

05:12 PM Jul 27, 2024 | Team Udayavani |

ಮಂಗಳೂರು: ಮಂಗಳೂರು – ಬೆಂಗಳೂರು ನಡುವಿನ ಸುಬ್ರಹ್ಮಣ್ಯ ರೋಡ್‌ ರೈಲು ನಿಲ್ದಾಣ ಸಮೀಪದ ಎಡಕುಮೇರಿ – ಕಡಗರವಳ್ಳಿ ನಡುವಿನ ದೋಣಿಗಲ್‌ ಎಂಬಲ್ಲಿ ರೈಲು ಮಾರ್ಗದ ಹಳಿಯಲ್ಲಿ ಮಣ್ಣು ಕುಸಿತ ಪ್ರಕರಣದಿಂದಾಗಿ ಸೋಮವಾರ (ಜುಲೈ 29) ದವರೆಗೆ ರೈಲು ಸಂಚಾರ ಸ್ಥಗಿತವಾಗಿದೆ.

Advertisement

ದುರಸ್ತಿ ಕಾರ್ಯ ನಡೆಯುತ್ತಿದ್ದು, ಎರಡು ಮೂರು ದಿನಗಳು ಬೇಕಾಗಬಹುದು ಎಂದು ರೈಲ್ವೇ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸತತ ಮಳೆಗೆ ಶುಕ್ರವಾರ ಸಂಜೆ ರೈಲು ಹಳಿಯ ಕೆಳ ಭಾಗದಲ್ಲಿ ಮಣ್ಣು ಕುಸಿದು ಬೆಂಗಳೂರು – ಮಂಗಳೂರು ನಡುವೆ ರೈಲು ಸಂಚಾರ ಸ್ಥಗಿತಗೊಂಡಿದೆ. ಘಟನೆಯಿಂದಾಗಿ ಶುಕ್ರವಾರ ಸಂಜೆ 5.30ಕ್ಕೆ ಸುಬ್ರಹ್ಮಣ್ಯ ರೋಡ್‌ ರೈಲು ನಿಲ್ದಾಣದಿಂದ ಹೊರಟಿದ್ದ ವಿಜಯಪುರ ಎಕ್ಸ್‌ಪ್ರೆಸ್‌ ರೈಲು ಸುಬ್ರಹ್ಮಣ್ಯ ರೋಡ್‌ ರೈಲು ನಿಲ್ದಾಣಕ್ಕೆ ಹಿಂದಿರುಗಿತ್ತು.

ರೈಲು ರದ್ದಾದ ಹಿನ್ನೆಲೆಯಲ್ಲಿ ರೈಲ್ವೆ ಅಧಿಕಾರಿಗಳು ಪ್ರಯಾಣಿಕರಿಗೆ ಬಸ್ಸಿನ ವ್ಯವಸ್ಥೆ ಮಾಡದ ಕಾರಣ ಮಾತಿನ ಚಕಮಕಿ ನಡೆಯಿತು. ಪ್ರಯಾಣಿಕರಿಗೆ ರೈಲು ಬಳಕೆದಾರರ ವೇದಿಕೆ ಪದಾಧಿಕಾರಿಗಳು ಬಸ್ಸಿನ ವ್ಯವಸ್ಥೆ ಕಲ್ಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next