Advertisement

ಉತ್ತಮ ಅಂಕ ಗಳಿಸಿದವರಿಗೆ ಲ್ಯಾಪ್‌ಟಾಪ್‌ ವಿತರಣೆ

08:23 AM Jul 21, 2020 | Suhan S |

ತುಮಕೂರು: ವಿದ್ಯಾನಿಧಿ ಪದವಿ ಪೂರ್ವ ಕಾಲೇಜಿನಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸಂಸ್ಥೆಯಿಂದ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಕೆ.ಬಿ. ಜಯಣ್ಣ ಹಾಗೂ ಕಾರ್ಯದರ್ಶಿ ಎನ್‌. ಬಿ.ಪ್ರದೀಪ್‌ಕುಮಾರ್‌ ಗೌರವಿಸಿದರು.

Advertisement

ಈ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿ ರಾಜ್ಯ ಮಟ್ಟದಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಾದ ಎ.ದೀಪ್ತಿ (ಶೇ.98.83) ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ನಾಲ್ಕನೇ ಮತ್ತು ಜಿಲ್ಲೆಗೆ ಪ್ರಥಮ ರ್‍ಯಾಂಕ್‌, ಜೆ.ತರುಣ್‌ (ಶೇ.99) ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ನಾಲ್ಕನೇ ಮತ್ತು ಜಿಲ್ಲೆಗೆ ಪ್ರಥಮ ರ್‍ಯಾಂಕ್‌, ಶ್ರದ್ಧಾಭಟ್‌ (ಶೇ.98.83) ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಐದನೇ ಮತ್ತು ಜಿಲ್ಲೆಗೆ ಎರಡನೇ ರ್‍ಯಾಂಕ್‌ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡಿ ಅಭಿನಂದಿಸಿದರು.

ನಮ್ಮ ಕಾಲೇಜಿನಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ ಟಾಪ್‌ ವಿತರಣೆಯನ್ನು ಪ್ರತಿ ವರ್ಷ ಮಾಡಿ ಕೊಂಡು ಬರುತ್ತಿದ್ದು ಅದನ್ನು ಈ ಬಾರಿಯೂ ಮುಂದುವರಿಸಿದ್ದು ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸಿ ಮುಂದೆಯೂ ಉತ್ತಮ ಸಾಧನೆ ಮಾಡಬೇ ಕೆಂದು ಕಾರ್ಯದರ್ಶಿ ಪ್ರದೀಪ್‌ ಕುಮಾರ್‌ ತಿಳಿಸಿ, ಉತ್ತಮ ಅಂಕ ಪಡೆದು ಸಾಧನೆ ಮಾಡಿರುವ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next