Advertisement

ಲ್ಯಾಪ್‌ಟಾಪ್‌ ಹಂಚಿಕೆ ವಿಳಂಬ: ಬೇರೆ ಮಾರ್ಗದಲ್ಲಿ ಪ್ರಶ್ನೆ ಕೇಳುವಂತೆ ಸ್ಪೀಕರ್‌ ಕಾಗೇರಿ ಸಲಹೆ

06:34 PM Dec 22, 2022 | Team Udayavani |

ಸುವರ್ಣ ವಿಧಾನಸೌಧ: ವಿಶ್ವವಿದ್ಯಾಲಯ ವ್ಯಾಪ್ತಿಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಹಂಚಿಕೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌. ಅಶ್ವತ್ಥನಾರಾಯಣ ಅವರು ನೀಡಿರುವ ಉತ್ತರ ಸಮಂಜಸವಾಗಿಲ್ಲದ ಕಾರಣ ಪ್ರಶ್ನೆಯನ್ನು ಬೇರೆ ಮಾರ್ಗದಲ್ಲಿ ಕೇಳುವಂತೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಪ್ರಶ್ನೆ ಕೇಳಿದ್ದ ಅಬ್ಬಯ್ಯ ಪ್ರಸಾದ್‌ ಅವರಿಗೆ ಸಲಹೆ ನೀಡಿದ ಘಟನೆ ವಿಧಾನ ಸಭೆಯಲ್ಲಿ ಗುರುವಾರ ನಡೆಯಿತು.

Advertisement

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯಲ್ಲಿ ಸ್ನಾತಕೋತ್ತರ ಅಧ್ಯಯನ ಮಾಡುತ್ತಿರುವ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ 2019ರಿಂದ ಈವರೆಗೆ (1800) ಲ್ಯಾಪ್‌ಟಾಪ್‌ ವಿತರಣೆ ಮಾಡಿಲ್ಲ ಎಂಬ ಬಗ್ಗೆ ಕಾಂಗ್ರೆಸ್‌ನ ಅಬ್ಬಯ್ಯ ಪ್ರಸಾದ್‌ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಲ್ಯಾಪ್‌ಟಾಪ್‌ ವಿತರಣೆಯಲ್ಲಿ ವಿಳಂಬವಾಗಿರುವುದು ನಿಜ. ಆದರೆ, ಇದು ನಮ್ಮ ಇಲಾಖೆಯ ಕಾರ್ಯಕ್ರಮ ಅಲ್ಲ. ಸಮಾಜ ಕಲ್ಯಾಣ ಇಲಾಖೆಯ ಕಾರ್ಯಕ್ರಮ. 245 ಕೋ.ರೂ. ಬೇಡಿಕೆ ಇಟ್ಟಿದ್ದೇವೆ. 80 ಕೋ.ರೂ. ಪ್ರಸ್ತಾವನೆಯನ್ನು ಉನ್ನತ ಶಿಕ್ಷಣ ಕೌನ್ಸಿಲ್‌ಗೆ ಕಳುಹಿಸಿದ್ದೇವೆ. 2022-23ನೇ ಸಾಲಿನಲ್ಲಿ 1.45 ಕೋ.ರೂ. ಬಿಡುಗಡೆ ಮಾಡಲಾಗಿದೆ ಎಂದರು.

ಇದು ಯಾವ ಖಾತೆಯಿಂದ ನೀಡಲಾಗುತ್ತಿದೆ ಎಂದು ಕಾಂಗ್ರೆಸ್‌ನ ಪ್ರಿಯಾಂಕ ಖರ್ಗೆಯವರು ಕೇಳಿದಾಗ, ಸಚಿವರು ಸಮರ್ಪಕ ಉತ್ತರ ನೀಡಿದ ಹಿನ್ನೆಲೆಯಲ್ಲಿ ಸ್ಪೀಕರ್‌ ಕೂಡ ಈ ಬಗ್ಗೆ ಸ್ಪಷ್ಟತೆ ಸಿಕ್ಕಿಲ್ಲ. ಬೇರೆ ರೀತಿಯಲ್ಲಿ ಪ್ರಶ್ನೆ ಕಳುಹಿಸಿ, ಇದ್ದೇನೆ ಮುಂದುವರಿಸುವುದು ಬೇಡ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next