Advertisement

ಶ್ರೀನಗರ : ಭದ್ರತಾ ಪಡೆಗಳ ಗುಂಡಿಗೆ ಪಾಕ್ ಎಲ್ಇಟಿ ಉಗ್ರ ಬಲಿ

03:43 PM Dec 19, 2021 | Team Udayavani |

ಶ್ರೀನಗರ: ಭಾನುವಾರ ಮುಂಜಾನೆ ನಗರದ ಹರ್ವಾನ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಪಾಕಿಸ್ಥಾನದ ಲಷ್ಕರ್-ಎ-ತೈಬಾ (ಎಲ್‌ಇಟಿ) ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಹರ್ವಾನ್ ಪ್ರದೇಶದಲ್ಲಿ ಭಯೋತ್ಪಾದಕರಿರುವ ಬಗ್ಗೆ ನಿರ್ದಿಷ್ಟ ಮಾಹಿತಿಯ ನಂತರ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ಈ ವೇಳೆ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ ನಂತರ ಶೋಧ ಕಾರ್ಯಾಚರಣೆಯು ಎನ್‌ಕೌಂಟರ್‌ಗೆ ತಿರುಗಿದೆ. ಗುಂಡಿನ ಚಕಮಕಿಯಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.

ಹತ್ಯೆಯಾದ ಉಗ್ರನನ್ನು ಪಾಕಿಸ್ಥಾನದ ಕರಾಚಿ ನಿವಾಸಿ ಸೈಫುಲ್ಲಾ ಎಂದು ಗುರುತಿಸಲಾಗಿದೆ. ಸೈಫುಲ್ಲಾ ನನ್ನು ಅಬು ಖಾಲಿದ್ ಶವಾಜ್ ಎಂದೂ ಕರೆಯಲಾಗುತ್ತಿತ್ತು. ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್ಇಟಿ ಉಗ್ರ 2016 ರಲ್ಲಿ ಭಾರತದ ಗಡಿ ನುಸುಳಿ ಹರ್ವಾನ್ ಸಾಮಾನ್ಯ ಪ್ರದೇಶದಲ್ಲಿ ಸಕ್ರಿಯರಾಗಿದ್ದ ಮತ್ತು ಹಲವಾರು ಕೃತ್ಯಗಳಲ್ಲಿ ಭಾಗಿಯಾಗಿದ್ದ ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಕಳೆದ 33 ದಿನಗಳಲ್ಲಿ ಶ್ರೀನಗರದಲ್ಲಿ ಮೂವರು ಪಾಕಿಸ್ಥಾನಿ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಅವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next