Advertisement

ಕಳೆದ ಬಾರಿ ಸೋತರೂ ನುಡಿದಂತೆ ನಡೆದಿದ್ದೇನೆ: ಶ್ರೀನಿವಾಸ ಮಾನೆ

11:28 AM Oct 22, 2021 | Team Udayavani |

ಹಾನಗಲ್ಲ: ಕೊಟ್ಟ ಮಾತಿಗೆ ತಪ್ಪಿ ನಡೆದರೆ ಮೆಚ್ಚನಾ ಪರಮಾತ್ಮನು ಎನ್ನುವುದನ್ನು ಬದುಕಿನುದ್ದಕ್ಕೂ ಪಾಲಿಸಿಕೊಂಡು ಬಂದಿರುವ ನಾನು, ಕಳೆದ ಚುನಾವಣೆಯ ಸಮಯದಲ್ಲಿ ಏನೇ ಆದರೂ ಈ ಕ್ಷೇತ್ರದಲ್ಲೇ ಇದ್ದು ನಿಮ್ಮ ಸೇವಕನಾಗಿ ಇರುತ್ತೇನೆಂದು ಹೇಳಿದ್ದೆ. ನುಡಿದಂತೆ ಇಲ್ಲಿಯೇ ಇದ್ದು, ಪ್ರೀತಿ ಪಾತ್ರರಾದ ಜನರ ಮಧ್ಯೆಯೇ ಸೇವೆ ಸಲ್ಲಿಸುತ್ತಿದ್ದೇನೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಶ್ರೀನಿವಾಸ ಮಾನೆ ಹೇಳಿದರು.

Advertisement

ಹಾನಗಲ್ಲ ಉಪಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದ ಚಿಕ್ಕಾಂಶಿ ಹೊಸೂರು, ಹುಲ್ಲತ್ತಿ ಸೇರಿದಂತೆ ಹಲವೆಡೆ ಮತಯಾಚಿಸಿ ಅವರು ಮಾತನಾಡಿದರು. ಕ್ಷೇತ್ರದ ಸಮಸ್ಯೆಗಳನ್ನು ಅರಿತು ಸ್ಪಂದಿಸುವ ಕೆಲಸ ಕಳೆದ ಮೂರೂವರೆ ವರ್ಷಗಳಿಂದ ನನ್ನಿಂದ ಆಗಿದೆ ಎಂದು ಭಾವಿಸಿದ್ದೇನೆ. ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರಕಾರದ ಅವ ಧಿಯಲ್ಲಿ ಮಹತ್ವಾಕಾಂಕ್ಷಿ ಜನಪರ ಯೋಜನೆಗಳ ಅನುಷ್ಠಾನಕ್ಕೆ ಶ್ರಮಿಸಿದ್ದೇನೆ. ಪ್ರದೇಶಾಭಿವೃದ್ಧಿ ಅನುದಾನವನ್ನು ಜನಕಲ್ಯಾಣಕ್ಕೆ ಬಳಿಸಿದ ತೃಪ್ತಿ ನನ್ನದಾಗಿದೆ. ಕ್ಷೇತ್ರದ ಭವಿಷ್ಯದ ದಿನಗಳನ್ನು ಸುಂದರವಾಗಿಸಬೇಕೆನ್ನುವುದು ನನ್ನ ಬಯಕೆಯಾಗಿದೆ. ತಾವೆಲ್ಲ ಜೊತೆಗಿದ್ದು, ಬೆಂಬಲದ ರಕ್ಷೆಯಾದರೆ ಕಂಡ ಕನಸು ನನಸಾಗಿಸಲು ಶಕ್ತಿ ಮೀರಿ ಪ್ರಯತ್ನಿಸುವೆ ಎಂದರು. ಪ್ರಚಾರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌, ಮಾಜಿ ಸಚಿವರಾದ ಎಚ್‌.ಕೆ. ಪಾಟೀಲ, ಮನೋಹರ ತಹಶೀಲ್ದಾರ, ಕೃಷ್ಣಭೈರೇಗೌಡ, ಶಾಸಕ ಶರತ್‌ ಬಚ್ಚೇಗೌಡ, ಮಾಜಿ ಶಾಸಕ ಮಧು ಬಂಗಾರಪ್ಪ, ಮಾಜಿ ಶಾಸಕ ಸಂಪಂಗಿ, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಪುಷ್ಪಾ ಅಮರನಾಥ್‌, ಭೀಮಣ್ಣ ನಾಯಕ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next