Advertisement
ನಿಧನ ಹೊಂದುವ 3 ಗಂಟೆಗಳಿಗೆ ಮೊದಲು ಟ್ವೀಟ್ ಮಾಡಿರುವ ಸುಷ್ಮಾ ಅವರು, ನಾನು ನನ್ನ ಜೀವನದಲ್ಲಿ ಈ ದಿನಕ್ಕಾಗಿ ಕಾಯುತ್ತಿದ್ದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಎಂದಿದ್ದರು. ಟ್ವೀಟ್ ಮಾಡಿದ ಕೆಲವೇ ತಾಸುಗಳಲ್ಲಿ ನಿಧನ ಹೊಂದಿದ್ದಾರೆ.
1970ರಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮೂಲಕ ರಾಜಕೀಯಕ್ಕೆ ಅವರು ಪಾದಾರ್ಪಣೆ ಮಾಡಿದರು. ಜಯಪ್ರಕಾಶ್ ನಾರಾಯಣರ ಅವರ ಹೋರಾಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದ ಸುಷ್ಮಾ ಅವರು ತುರ್ತು ಪರಿಸ್ಥಿತಿಯ ಬಳಿಕ ಬಿಜೆಪಿಗೆ ಸೇರಿದ್ದರು.
Related Articles
ಸುಷ್ಮಾ ಸ್ವರಾಜ್ ಅವರು ದಿಲ್ಲಿಯ ಮುಖ್ಯಮಂತ್ರಿಯಾಗಿ 13 ಅಕ್ಟೋಬರ್ 1998ರಿಂದ ಡಿಸೆಂಬರ್ 3, 1998ರ ವರೆಗೆ ಸೇವೆ ಸಲ್ಲಿಸಿದ್ದರು. 7 ಬಾರಿ ಸಂಸತ್ತು ಹಾಗೂ 3 ಬಾರಿ ಹರಿಯಾಣ ರಾಜ್ಯ ವಿಧಾನ ಸಭೆ ಪ್ರವೇಶಿಸಿದ್ದರು.
Advertisement
1990ರಲ್ಲಿ ಎಪ್ರಿಲ್ನಲ್ಲಿ ಮೊದಲ ಬಾರಿ ರಾಜ್ಯಸಭೆಯ ಮೂಲಕ ಸಂಸತ್ತು ಪ್ರವೇಶಿಸಿದ್ದರು. 1996ರಲ್ಲಿ ಲೋಕಸಭೆಗೆ ಆಯ್ಕೆಯಾದರು. ಬಳಿಕ 13 ದಿನಗಳ ವಾಜಪೇಯಿ ಸರಕಾರದಲ್ಲಿ ಮಂತ್ರಿಯಾಗಿದ್ದರು. ಬಳಿಕ ಸಚಿವ ಸ್ಥಾನ ತೊರೆದು ದಿಲ್ಲಿಯ ಮುಖ್ಯಮಂತ್ರಿಯಾದರು.
1998ರಲ್ಲಿ ವಾಜಪೇಯಿ ಅವರು ಪ್ರಧಾನಿಯಾಗಿದ್ದ 12ನೇ ಲೋಕಸಭೆಯಲ್ಲಿ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಖಾತೆಯ ಮಂತ್ರಿಯಾದರು. ಬಳಿಕ ಎನ್ಡಿಎ ಅವಧಿಯ ಕೆಲವು ಸರಕಾರಗಳಲ್ಲಿ ಕೇಂದ್ರ ಸಚಿವೆಯಾಗಿದ್ದರು. ಬಳಿಕ ಲೋಕಸಭೆಯ ವಿಪಕ್ಷ ನಾಯಕಿಯಾಗಿಯೂ ಅವರು ಸೇವೆ ಸಲ್ಲಿಸಿದ್ದರು. ವಿದೇಶಾಂಗ ಸಚಿವೆಯಾಗಿ 2014ರ ಮೋದಿ ಸಂಪುಟದಲ್ಲಿ ಕರ್ತವ್ಯ ನಿರ್ವಹಿಸಿದ್ದರು.
ರಾಜ್ಯದಿಂದ ಸ್ಪರ್ಧಿಸಿದ್ದ ಸುಷ್ಮಾಸುಷ್ಮಾ ಸ್ವರಾಜ್ ಅವರು 1999ರಲ್ಲಿ 13ನೇ ಲೋಕಸಭೆಗೆ ರಾಜ್ಯದ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ದ ಸ್ಪರ್ಧಿಸಿದ್ದರು. ಆಂದಿನ ರಾಜಕೀಯ ಸಮಯದಲ್ಲಿ ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿತ್ತು. ಅಂತಹ ಸಮಯದಲ್ಲೂ ರಾಜ್ಯದಿಂದ ಸ್ಪರ್ಧಿಸುವ ಧೈರ್ಯ ತೋರಿಸಿದ್ದರು. 12 ದಿನಗಳ ಕಾಲ ಪ್ರಚಾರ ನಡೆಸಿ 3.5 ಲಕ್ಷ ಮತ ಗಳಿಸುವಲ್ಲಿ ಯಶಸ್ವೀಯಾಗಿದ್ದರು. ಆದರೆ 7 ಶೇ. ಮತಗಳ ಅಂತರದಲ್ಲಿ ಸೋನಿಯಾ ಗಾಂಧಿ ವಿರುದ್ಧ ಪರಾಜಯಗೊಂಡಿದ್ದರು. ಸೋತ ಬಳಿಕವೂ ರಾಜ್ಯದ ಕುರಿತಾಗಿ ವಿಶೇಷ ಕಾಳಜಿ ಹೊಂದಿದ್ದರು. ಬಳ್ಳಾರಿ ಜಿಲ್ಲೆಯ ಕುರಿತಾಗಿ ವಿಶೇಷ ಕಾಳಜಿ ಹೊಂದಿದ್ದರು. ವರಮಹಾಲಕ್ಷೀ ಪೂಜೆಯ ಸಂದರ್ಭ ಬಳ್ಳಾರಿಗೆ ಭೇಟಿ ನೀಡುತ್ತಿದ್ದರು. ಇತ್ತೀಚೆಗಿನ ಕೆಲವು ವರ್ಷಗಳಲ್ಲಿ ಈ ಸಂಪ್ರದಾಯವನ್ನು ಕೊನೆಗೊಳಿಸಿದ್ದರು. ಬಳ್ಳಾರಿಯ ರೆಡ್ಡಿ ಕುಟುಂಬದ ಜತೆ ಒಳ್ಳೆಯ ಬಾಂಧವ್ಯ ಹೊಂದಿದ್ದರು. ಆದರೆ ರೆಡ್ಡಿಗಳ ವಿರುದ್ದ ಭ್ರಷ್ಟಾಚಾರದ ಆರೋಪ ಕೇಳಿ ಬಂದ ಬಳಿಕ ಬಳ್ಳಾರಿಗೆ ಬರಲಿಲ್ಲ. ಸುಷ್ಮಾ ಅವರು ಇನ್ನಿಲ್ಲ ಎಂಬ ವಿಷಯ ತಿಳಿಯುತ್ತಿದ್ದಂತೆ ಸರಣಿ ಟ್ವೀಟ್ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತೀಯ ರಾಜಕೀಯದ ವೈಭವಯುತ ಅಧ್ಯಾಯವೊಂದು ಮುಗಿದಿದೆ. ಸಾರ್ವಜನಿಕರ ಸೇವೆಗೆಂದೇ ಹಾಗೂ ಬಡವರ ಬದುಕು ಹಸನಾಗಿಸಲೆಂದೇ ತಮ್ಮ ಜೀವನವನ್ನು ಮುಡುಪಾಗಿಟ್ಟ ಬದ್ಧತೆಯುಳ್ಳ ನಾಯಕಿ ಎಂದರು.
ಒಬ್ಬ ಸಚಿವೆಯಾಗಿ ಸಂಕಷ್ಟಕ್ಕೆ ಸಿಲುಕಿದವರಿಗೆ ನೆರವಿನ ಹಸ್ತ ಚಾಚುವ ಮೂಲಕ ತಮ್ಮ ಮಾನವೀಯ ಮುಖವನ್ನೂ ತೋರಿಸಿದ್ದರು ಎಂದರು.