Advertisement

ಕಾಂಗ್ರೆಸ್ ಗೆ ಬೇಷರತ್ ಬೆಂಬಲ ನೀಡಿದ ಪಕ್ಷೇತರೆ ಲತಾ ಮಲ್ಲಿಕಾರ್ಜುನ್

04:46 PM May 14, 2023 | Team Udayavani |

ಬೆಂಗಳೂರು: ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ಆಯ್ಕೆಯಾಗಿರುವ ಲತಾ ಮಲ್ಲಿಕಾರ್ಜುನ್ ಅವರು ಕಾಂಗ್ರೆಸ್ ಪಕ್ಷಕ್ಕೆ ಬೇಷರತ್ ಬೆಂಬಲ ನೀಡಿದ್ದಾರೆ ಎಂದು ಎಐಸಿಸಿ ಕರ್ನಾಟಕ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಭಾನುವಾರ ಹೇಳಿದ್ದಾರೆ.

Advertisement

“ಲತಾ ಅವರು ತಮ್ಮ ಸೈದ್ಧಾಂತಿಕ ಬೇರುಗಳು ಮತ್ತು ಕಾಂಗ್ರೆಸ್ ಆದರ್ಶಗಳಿಗೆ ಬದ್ಧತೆಯನ್ನು ಪರಿಗಣಿಸಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೇಷರತ್ ಬೆಂಬಲವನ್ನು ನೀಡಿದ್ದಾರೆ. ನಾನು ಅವರಿಗೆ, ಅವರ ಪತಿ ಮಲ್ಲಿಕಾರ್ಜುನ್ ಮತ್ತು ಎಲ್ಲಾ ಬೆಂಬಲಿಗರಿಗೆ ಮತ್ತು ಹಿತೈಷಿಗಳಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ 6.5 ಕೋಟಿ ಕನ್ನಡಿಗರಿಗೆ ಒಟ್ಟಾಗಿ ಸೇವೆ ಸಲ್ಲಿಸುತ್ತೇವೆ ಎಂದು ಸುರ್ಜೇವಾಲಾ ಟ್ವೀಟ್ ಮಾಡಿದ್ದಾರೆ.

ಲತಾ ಮಲ್ಲಿಕಾರ್ಜುನ್ ಅವರು ಹಿರಿಯ ನಾಯಕ ಮತ್ತು ಮಾಜಿ ಉಪ ಮುಖ್ಯಮಂತ್ರಿ ದಿವಂಗತ ಎಂಪಿ ಪ್ರಕಾಶ್ ಅವರ ಪುತ್ರಿ.

ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಲತಾ ಮಲ್ಲಿಕಾರ್ಜುನ್ ಅವರು ಹರಪನಹಳ್ಳಿ ಕ್ಷೇತ್ರದಲ್ಲಿ ಬಿಜೆಪಿಯ ಜಿ ಕರುಣಾಕರ ರೆಡ್ಡಿ ಅವರನ್ನು 13,845 ಮತಗಳ ಅಂತರದಿಂದ ಸೋಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next