Advertisement

RLSP ರ‍್ಯಾಲಿಯಲ್ಲಿ ಹಿಂಸಾಚಾರ ;ಮಾಜಿ ಕೇಂದ್ರ ಸಚಿವ ಕುಶ್ವಾಹಗೆ ಗಾಯ

01:56 PM Feb 02, 2019 | Team Udayavani |

 ಪಟ್ನಾ: ಬಿಹಾರದಲ್ಲಿ ಆರ್‌ಎಲ್‌ಎಸ್‌ಪಿ ಪಕ್ಷದ ಬೃಹತ್‌ ಪ್ರತಿಭಟನಾ ರ‍್ಯಾಲಿ ನಡೆಯುತ್ತಿದ್ದ ವೇಳೆ ಪೊಲೀಸ್‌ ಲಾಠಿ ಚಾರ್ಜ್‌ ನಡೆಸಿದ್ದು, ಮಾಜಿ ಕೇಂದ್ರ ಸಚಿವ, ಆರ್‌ಎಸ್‌ಎಲ್‌ಪಿ ಮುಖ್ಯಸ್ಥ ಉಪೇಂದ್ರ ಕುಶ್ವಾಹ ಸೇರಿ ಹಲವರು ಗಾಯಗೊಂಡಿದ್ದಾರೆ. ಈ ಘಟನೆ ನಿತಿಶ್‌ ಕುಮಾರ್‌ ನೇತೃತ್ವದ ಎನ್‌ಡಿಎ ಸರ್ಕಾರದ ನಡುವಿನ ಹೊಸ ಸಂಘರ್ಷಕ್ಕೆ ಕಾರಣವಾಗಿದೆ.

Advertisement

ಉಪೇಂದ್ರ ಕುಶ್ವಾಹ ಅವರು ಡಿಸೆಂಬರ್‌ ತಿಂಗಳಿನಲ್ಲಿ ಎನ್‌ಡಿಎ ಮೈತ್ರಿ ಕೂಟದಿಂದ ಹೊರ ಬಂದು ಕಾಂಗ್ರೆಸ್‌ ನೇತೃತ್ವದ ಮಹಾಘಟಬಂಧನ್‌ ಸೇರಿಕೊಂಡ ಬೆನ್ನಲ್ಲೇ  ಈ ಘಟನೆ ನಡೆದಿದೆ. ಲಾಠಿ ಚಾರ್ಜ್‌ನಲ್ಲಿ ಗಾಯಗೊಂಡಿರುವ ಕುಶ್ವಾಹ ಅವರು ನಿತಿಶ್‌ ಕುಮಾರ್‌ ಅವರೇ ನಮ್ಮ ಮೇಲೆ ಲಾಠಿ ಚಾರ್ಜ್‌ ಮಾಡಿಸಿದ್ದಾರೆ ಎಂದು ಆರೋಪಿಸಿದ್ದಾರೆ. 

ಶಾಲಾ ಮತ್ತು ಉನ್ನತ ಶಿಕ್ಷಣದ ಗುಣಮಣ್ಣ ಕುಸಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಜನ ಆಕ್ರೋಶ್‌ ರ‍್ಯಾಲಿ ನಡೆಸುತ್ತಿದ್ದ ಆರ್‌ಎಲ್‌ಎಸ್‌ಪಿ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್‌ ನಡೆದಿದೆ. 

ಲಾಠಿ ಚಾರ್ಜ್‌ನಲ್ಲಿ ಗಾಯಗೊಂಡಿರುವ ಕುಶ್ವಾಹ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next