Advertisement

ಮಲೆ ಮಹದೇಶ್ವರ ರಥೋತ್ಸವ; ಕಾಲ್ತುಳಿತ; ಲಾಠಿ ಚಾರ್ಜ್‌ 

01:44 PM Oct 20, 2017 | |

ಕೊಳ್ಳೇಗಾಲ: ಇತಿಹಾಸ ಪ್ರಸಿದ್ದ ಮಲೆ ಮಹದೇಶ್ವರ ಸನ್ನಿಧಿಯಲ್ಲಿ ಶುಕ್ರವಾರ ಮಹಾ ರಥೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ರಾಜ್ಯ ಸೇರಿದಂತೆ ಹೊರ ರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು ಆಗಮಿಸಿದ್ದಾರೆ. 

Advertisement

3 ದಿನಗಳಿಂದ ನಡೆಯುತ್ತಿರುವ ಜಾತ್ರೆಯ ಆಚರಣೆಯ ವೇಳೆ ನೂಕುನುಗ್ಗಲು ಉಂಟಾಗಿದ್ದು , ಭಕ್ತರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. 

ಭ್ರದತೆಗೆ ನಿಯೋಜನೆಗೊಂಡಿದ್ದ ಸಿಬಂದಿಗಳು ಸೇರಿ ಕೆಲವರು ನೂಕು ನುಗ್ಗಲಿನಲ್ಲಿ ಸಣ್ಣಪುಟ್ಟ ಗಾಯಗಳಿಗೆ ಒಳಗಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. 

ತಮಿಳು ನಾಡು, ಕೇರಳ ಸೇರಿದಂತೆ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಭಕ್ತರು ಆಗಮಿಸಿ ರಥೋತ್ಸವವನ್ನು ಕಣ್‌ತುಂಬಿಸಿಕೊಂಡಿದ್ದಾರೆ. ಸಣ್ಣ ಪುಟ್ಟ ಘಟನೆಗಳ ಹೊರತಾಗಿಯೂ ರಥೋತ್ಸವ ಸಾಂಗವಾಗಿ ಶುಕ್ರವಾರ ಬೆಳಗ್ಗೆ ನೆರವೇರಿದೆ. 

Advertisement

Udayavani is now on Telegram. Click here to join our channel and stay updated with the latest news.

Next