Advertisement

ಲಾತೂರ್‌:ಕಂದಕಕ್ಕೆ ಬಿದ್ದ ಕೆಎಸ್‌ಆರ್‌ಟಿಸಿ ಬಸ್‌,ಯುವತಿ ಸಾವು 

11:31 AM Oct 15, 2017 | Team Udayavani |

ಲಾತೂರು :ಇಲ್ಲಿನ ಶೆಲ್ದಾಳ ಬಳಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಕಂದಕಕ್ಕೆ ಬಿದ್ದ ದುರ್ಘ‌ಟನೆ ಭಾನುವಾರ ಬೆಳಗ್ಗೆ ನಡೆದಿದ್ದು,ಅವಘಡದಲ್ಲಿ ಬೀದರ್‌ನ ಯುವತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ  ಬಗ್ಗೆ ವರದಿಯಾಗಿದೆ. 

Advertisement

ಬೀದರ್‌ನಿಂದ ತೆರಳಿದ್ದ ಬಸ್‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಕಂದಕಕ್ಕೆ ಉರುಳಿದೆ ಎಂದು ಹೇಳಲಾಗಿದ್ದು , ಗಾಯಾಳುಗಳನ್ನು ಸ್ಥಳೀಯರು ರಕ್ಷಣಾ ಕಾರ್ಯ ನಡೆಸಿ  ಆಸ್ಪತ್ರೆಗೆ ದಾಖಲಿಸಿರುವ ಬಗ್ಗೆ ವರದಿಯಾಗಿದೆ. 

ಮೃತ ಮಹಿಳೆ ಬೀದರ್‌ ಜಿಲ್ಲೆಯ ಔರಾದ್‌ನ ಮರ್ಕಿಯ ಮಮತಾ(25)ಎಂದು ಗುರುತಿಸಲಾಗಿದೆ. 

ಗಾಯಾಳುಗಳ ಪೈಕಿ ಹಲವರ ಸ್ಥಿತಿ ಗಂನೀರವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. 

ಉದಗೀರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next