Advertisement
ನಗರದ ಕನ್ನಡ ಭವನದಲ್ಲಿ ಕಸಾಪ ಉತ್ತರ ವಲಯ ಗುರುವಾರ ಹಮ್ಮಿಕೊಂಡಿದ್ದ ಕನ್ನಡ ಭಾಷೆ ಮತ್ತು ಬದುಕು ಕುರಿತ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡ ಮಾತೃಭಾಷೆ ಜತೆಯಲ್ಲಿ ಅನ್ನ ಒದಗಿಸುವ ಉದ್ಯೋಗದ ಭಾಷೆಯೂ ಆಗಬೇಕು. ಆದರೆ, ಕರ್ನಾಟಕದಲ್ಲಿ ಅದಿನ್ನು ಆಗಿಲ್ಲ.
Related Articles
Advertisement
ಕನ್ನಡ ಭಾಷೆ ಮತ್ತು ಬದುಕು ಕುರಿತು ವಿಶೇಷ ಉಪನ್ಯಾಸ ನೀಡಿದ ಸಾಹಿತಿ ಪ. ಮಾನು ಸಗರ್, ಭಾಷಾವಾರು ಪ್ರಾಂತ ರಚನೆಯಾಗಿ 60 ವರ್ಷಗಳು ಕಳೆದರೂ ಸಹ ಕನ್ನಡ ಭಾಷೆ ಬೆಳವಣಿಗೆಗೆ ಇಲ್ಲಿಯವರೆಗಿನ ಸರ್ಕಾರಗಳು ಸಂಪೂರ್ಣ ನಿರ್ಲಕ್ಷಿಸಿವೆ. ಆಡಳಿತ ಭಾಷೆಯಾಗಿಯೂ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ.
ಪ್ರತಿ ಕಚೇರಿಗಳಲ್ಲಿ ಆಂಗ್ಲ ಭಾಷೆ ಬಳಕೆ ನಿರಂತರವಾಗಿ ನಡೆಯುತ್ತಿದೆ. ಕನ್ನಡ ಬಳಕೆ ಆಡಳಿತದಲ್ಲಿ ಆಗುತ್ತಿಲ್ಲ. ಇದರಿಂದ ಕನ್ನಡ ಭಾಷೆ ದಿನದಿಂದ ದಿನಕ್ಕೆ ತನ್ನ ವರ್ಚಸ್ಸು ಕಳೆದುಕೊಳ್ಳುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕಸಾಪ ಉತ್ತರ ವಲಯ ಅಧ್ಯಕ್ಷ ಲಿಂಗರಾಜ ಸಿರಗಾಪುರ, ಭಾಷೆ ಮೇಲೆ ನಮಗೆ ಪೀÅತಿ ಬೇಕು. ಅಂದಾಗಲೇ ಅದು ಉಳಿಯಲು ಸಾಧ್ಯ, ಇವತ್ತು ನೌಕರಿ ಕಾರಣಕ್ಕೆ ಇತರೆ ಭಾಷೆಗೆ ಮಣೆ ಹಾಕುವ ನಾವು ನಮ್ಮ ಭಾಷೆಯನ್ನು ಕಡೆಗಣಿಸುತ್ತಿದ್ದೇವೆ.
ಈ ನಿಟ್ಟಿನಲ್ಲಿ ಪರಿಷತ್ತು ಇನ್ನೂ ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಂಡು ಯುವಕರ ಮನಸ್ಸಿನಲ್ಲಿ ಭಾಷೆಯ ಪೀÅತಿ ಮೊಳಕೆ ಒಡೆಯುವಂತೆ ಮಾಡಲಾಗುವುದು ಎಂದು ಹೇಳಿದರು. ಕಸಾಪ ತಾಲೂಕು ಘಟಕದ ಅಧ್ಯಕ್ಷ ಸಿ.ಎಸ್. ಮಾಲಿಪಾಟೀಲ, ಸಂತೋಷ ಭೈರಾಮಡಗಿ, ಆಕಾಶ ರಾಠೊಡ ಇದ್ದರು. ಅಶೋಕ ಕಮಲಾಪುರ ಸ್ವಾಗತಿಸಿದರು. ಜಿ.ಜಿ. ವಣಿಕ್ಯಾಳ ಕಾರ್ಯಕ್ರಮ ನಿರೂಪಿಸಿದರು.