Advertisement

Udupi “ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಚಾಲನೆ

11:36 PM Sep 24, 2023 | Team Udayavani |

ಉಡುಪಿ: ಜಿಲ್ಲಾ ಬಿಜೆಪಿ ವತಿಯಿಂದ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ರವಿವಾರ “ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ ನೀಡಿದರು.

Advertisement

ದೇವರಿಗೆ ಪೂಜೆ ಸಲ್ಲಿಸಿ ಅನಂತರ ದೇಗುಲದ ಬಳಿ ಮಣ್ಣನ್ನು ಸಂಗ್ರಹಿಸಿ ಅದನ್ನು ಅಮೃತ ಕಲಶಗಳಲ್ಲಿರಿಸಿ ಕಡಿಯಾಳಿ ದೇವಸ್ಥಾನದಿಂದ ಬಿಜೆಪಿ ಜಿಲ್ಲಾ ಕಚೇರಿವರೆಗೆ ಮೆರವಣಿಗೆಯಲ್ಲಿ ತರಲಾಯಿತು.

ಬಿಜೆಪಿ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರಿಗೆ ಕಲಶವನ್ನು ಹಸ್ತಾಂತರಿಸಲಾಯಿತು. ಅ. 13ರ ಒಳಗೆ ಗ್ರಾ.ಪಂ. ವ್ಯಾಪ್ತಿ ಆಯೋಜಿಸುವ ಮೂಲಕ ಗ್ರಾಮದಲ್ಲಿ ಸಂಗ್ರಹಿಸಿದ ಮಣ್ಣನ್ನು ಮಂಡಲಗಳ ಮೂಲಕ ಜಿಲ್ಲಾ ಬಿಜೆಪಿ ಕಚೇರಿಗೆ ತಲುಪಿಸುವಂತೆ ಸೂಚಿಸಲಾಯಿತು.

ಶಾಸಕರಾದ ಯಶ್‌ಪಾಲ್‌ ಸುವರ್ಣ, ಗುರ್ಮೆ ಸುರೇಶ್‌ ಶೆಟ್ಟಿ, ಗುರುರಾಜ್‌ ಗಂಟಿಹೊಳೆ, ಕಿರಣ್‌ ಕೊಡ್ಗಿ, ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್‌, ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್‌ ಶೆಟ್ಟಿ ಮುಖಂಡರಾದ ಗೀತಾಂಜಲಿ ಸುವರ್ಣ, ವೀಣಾ ಶೆಟ್ಟಿ, ಶ್ಯಾಮಲಾ ಕುಂದರ್‌, ಕುತ್ಯಾರು ನವೀನ್‌ ಶೆಟ್ಟಿ, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಮನೋಹರ್‌ ಎಸ್‌. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ಸತ್ಯಾನಂದ ನಾಯಕ್‌, ಶಿವಕುಮಾರ್‌ ಅಂಬಲಪಾಡಿ, ಪ್ರತಾಪ್‌ ಶೆಟ್ಟಿ ಚೇರ್ಕಾಡಿ, ರಾಘವೇಂದ್ರ ಉಪ್ಪೂರು, ಪ್ರಕಾಶ್‌ ಶೆಟ್ಟಿ ಪಾದೆಬೆಟ್ಟು, ಕಿರಣ್‌ ಕುಮಾರ್‌, ದಾವುದ್‌ ಅಬುಬಕ್ಕರ್‌, ಆಲ್ವಿನ್‌ ಡಿ’ಸೋಜಾ, ಪ್ರವೀಣ್‌ ಕುಮಾರ್‌ ಗುರ್ಮೆ ಮತ್ತು ಅಭಿಯಾನದ ಸಂಯೋಜಕ ಸುಪ್ರಸಾದ್‌ ಶೆಟ್ಟಿ, ಸಹ ಸಂಚಾಲಕರಾದ ಶ್ರೀನಿಧಿ ಹೆಗ್ಡೆ, ಸುದೀಪ್‌ ಶೆಟ್ಟಿ ನಿಟ್ಟೆ ನಳಿನಿ ಪ್ರದೀಪ್‌ ರಾವ್‌, ನಗರಸಭೆ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next