Advertisement

ಹೊಸಬರ “ವೃಷಂಗ’ಚಿತ್ರಕ್ಕೆ ಚಾಲನೆ 

09:50 AM Nov 28, 2019 | Lakshmi GovindaRaj |

ಬಹುತೇಕ ಹೊಸಪ್ರತಿಭೆಗಳು ಸೇರಿ ನಿರ್ಮಿಸುತ್ತಿರುವ “ವೃಷಂಗ’ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಗವಿಪುರದ ಬಂಡೆಮಹಾಕಾಳಿ ದೇವಸ್ಥಾನದಲ್ಲಿ ನಡೆಯಿತು. ಹೆಣ್ಣಿನ ಶೋಷಣೆಯ ಬಗ್ಗೆಗಿನ ಕಥಾ ಹಂದರ ಹೊಂದಿರುವ ಈ ಚಿತ್ರದ ನಾಯಕರಾಗಿ ಹೇಮಂತ್‌ ಶೆಟ್ಟಿ ಅಭಿನಯಿಸುತ್ತಿದ್ದಾರೆ. ಉಳಿದಂತೆ ಮಾನಸ, ಪೂಜಾ, ಚೇತನ್‌, ಆನಂದ್‌ ಮುಂತಾದವರು ಈ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

Advertisement

“ಫ್ರೆಂಡ್ಸ್‌ ಪಿಕ್ಚರ್ಸ್‌ ಕ್ರಿಯೇಷನ್ಸ್‌’ ಲಾಂಛನದಲ್ಲಿ ಶ್ರೀಮತಿ ವಿಜಯಲಕ್ಷ್ಮೀ ರಾಮೇಗೌಡ ಮತ್ತು ಕುಮಾರಿ ಸಂಗೀತ ಎಸ್‌.ಆರ್‌ ಅವರು ನಿರ್ಮಿಸುತ್ತಿರುವ “ವೃಷಂಗ” ಚಿತ್ರಕ್ಕೆ “ರಮಣ ರಮಣಿ’ ಚಿತ್ರಕ್ಕೆ ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿ ಅನುಭವವಿರುವ ನಿರಂಜನ್‌ ರಂಗನಾಥ್‌ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಮುತ್ತು ರಾಜ್‌ ಈ ಚಿತ್ರಕ್ಕೆ ಚಿತ್ರಕಥೆ, ಸಂಭಾಷಣೆ ಬರೆದು, ಗೀತರಚನೆ ಮಾಡಿ ಪ್ರಧಾನ ನಿರ್ದೇಶನದ ಹೊಣೆ ಹೊತ್ತಿದ್ದಾರೆ.

ಚಿತ್ರದ ಮುಹೂರ್ತ ಸಮಾರಂಭದಲ್ಲಿ ಚಿತ್ರದ ಪ್ರಥಮ ಸನ್ನಿವೇಶಕ್ಕೆ ಶ್ರೀಮತಿ ವಿಜಯಲಕ್ಷ್ಮೀ ರಾಮೇಗೌಡ ಆರಂಭ ಫ‌ಲಕ ತೋರಿಸಿದರೆ, ರಂಗನಾಥ್‌ ಎಸ್‌.ಆರ್‌ ಕ್ಯಾಮೆರಾ ಸ್ವಿಚ್‌ ಆನ್‌ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದರು. ಆರು ಹಾಡುಗಳಿರುವ ಈ ಚಿತ್ರಕ್ಕೆ ಸರ್ವೆಶ್‌ ಜೈನ್‌ ಸಂಗೀತ ನೀಡುತ್ತಿದ್ದಾರೆ. ನಾಲ್ಕು ಸಾಹಸ ಸನ್ನಿವೇಶಗಳಿದ್ದು, ವೈಲೆಂಟ್‌ ವೇಲು ಸಾಹಸ ನಿರ್ದೇಶನ ಮಾಡಲಿದ್ದಾರೆ. ಯೇಸುದಾಸ್‌ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಚಿಕ್ಕಮಗಳೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next