Advertisement

ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಕಾನೂನು ಆಯೋಗದ ಮುಖ್ಯಸ್ಥ

07:29 PM Nov 08, 2022 | Team Udayavani |

ನವದೆಹಲಿ: ಕರ್ನಾಟಕ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿಯವರನ್ನು ಕಾನೂನು ಆಯೋಗದ ಮುಖ್ಯಸ್ಥರಾಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ. ನಾಲ್ಕು ವರ್ಷಗಳ ಬಳಿಕ ಕಾನೂನು ಆಯೋಗವನ್ನು ಕೇಂದ್ರ ಮತ್ತೆ ರಚಿಸಿದೆ.

Advertisement

ನ್ಯಾ. ಅವಸ್ಥಿ ಅವರ ಜತೆಗೆ ಕೇರಳ ಹೈಕೋರ್ಟ್‌ನ ನ್ಯಾ. ಕೆ.ಟಿ.ಶಂಕರನ್‌, ಪ್ರೊ. ಆನಂದ್‌ ಪಲಿವಾಲ್‌, ಪ್ರೊ. ಡಿ.ಪಿ.ವರ್ಮಾ, ಪ್ರೊ. ರಕ ಆರ್ಯ ಹಾಗೂ ಎಂ.ಕರುಣಾನಿಧಿಯವರನ್ನು ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಮಾಹಿತಿ ನೀಡಿದ್ದಾರೆ.

ನ್ಯಾ.ಅವಸ್ಥಿಯವರು ಅಲಹಾಬಾದ್‌ ಹೈಕೋರ್ಟ್‌ನ ನ್ಯಾಯಾಧೀಶರಾಗಿದ್ದರು. ನಂತರ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿ, 2022ರ ಜು.2ರಂದು ನಿವೃತ್ತರಾದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next